Select Your Language

Notifications

webdunia
webdunia
webdunia
webdunia

ಎಂ.ಬಿ.ಪಾಟೀಲ್ ಕಾಂಗ್ರೆಸ್ ನ ಗೃಹ ಸಚಿವ!

ಎಂ.ಬಿ.ಪಾಟೀಲ್ ಕಾಂಗ್ರೆಸ್ ನ ಗೃಹ ಸಚಿವ!
ಬೆಂಗಳೂರು , ಶನಿವಾರ, 27 ಏಪ್ರಿಲ್ 2019 (15:48 IST)
ರಾಜ್ಯದಲ್ಲಿ ಚುನಾವಣೆ ಸಮಯದಲ್ಲಿ ಕೇಳಿಬರುತ್ತಿದ್ದ ಆರೋಪ ಪ್ರತ್ಯಾರೋಪಗಳ ಸರಣಿ ಮುಂದುವರಿದಿದೆ.

ಗೃಹ ಸಚಿವರ ನಕಲಿ‌ಪತ್ರ ಪ್ರಕಟಣೆ ಪ್ರಕರಣ ಸಂಬಂಧ ಪತ್ರಕರ್ತ ಹೇಮಂತ್ ಕುಮಾರ್ ಬಂಧನಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ. ಮಾಜಿ ಸಚಿವ ಸುರೇಶ್ ಕುಮಾರ್, ಅರವಿಂದ ಲಿಂಬಾವಳಿ, ವಿಧಾನ ಪರಿಷತ್ ಸದಸ್ಯ ರವಿಕುಮಾರ್ , ವಕ್ತಾರ ಅಶ್ವತ್ ನಾರಾಯಣ ಅವರನ್ನು ಒಳಗೊಂಡ ನಿಯೋಗ ಈ ದೂರು ನೀಡಿದೆ.

ಸುರೇಶ್ ಕುಮಾರ್ ಮಾತನಾಡಿದ್ದು, ರಾಜ್ಯದಲ್ಲಿ ‌ಗೃಹ ಸಚಿವರೇ ಇಲ್ಲ. ಇರುವುದು ಕಾಂಗ್ರೆಸ್ ಗೃಹ ಸಚಿವರು. ಎಂ.ಬಿ.ಪಾಟೀಲರು ಹಿಂದಿನ ಸರ್ಕಾರದಲ್ಲಿ ಇದ್ದಾಗ ಏನು ಮಾಡಿದ್ರು, ಧರ್ಮ‌ ಒಡೆಯುವ ಕೆಲಸ ಹೇಗೆ ಮಾಡಿದ್ರು ಎಂಬುದು ಎಲ್ಲರಿಗೂ ಗೊತ್ತಿದೆ.

ಈಗ ಅವರು ಸೇಡಿನ ರಾಜಕೀಯ ಮಾಡಲು ಹೊರಟಿರುವುದು ನಾಚಿಕೆಗೇಡಿನ‌ ಸಂಗತಿ ಎಂದರು. ನಾವು ಇದನ್ನು ಇಲ್ಲಿಗೆ ಬಿಡುವುದಿಲ್ಲ. ಕೇಂದ್ರದವರೆಗೂ ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳಿದ್ರು.




Share this Story:

Follow Webdunia kannada

ಮುಂದಿನ ಸುದ್ದಿ

ಐಸಿಸ್ ಉಗ್ರರು ರಾಜ್ಯದಲ್ಲಿ ಸಂಚಾರ?