Webdunia - Bharat's app for daily news and videos

Install App

ವಿವಾದಕ್ಕೀಡಾದ ಗಾಯಕಿ ಎಂಡಿ ಪಲ್ಲವಿ ಫೇಸ್ ಬುಕ್ ಪೋಸ್ಟ್

Webdunia
ಶುಕ್ರವಾರ, 1 ಮಾರ್ಚ್ 2019 (09:40 IST)
ಬೆಂಗಳೂರು: ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಕನ್ನಡ ಗಾಯಕಿ ಎಂಡಿ ಪಲ್ಲವಿ ಅವರ ಫೇಸ್ ಬುಕ್ ಪೋಸ್ಟ್ ಒಂದು ವಿವಾದಕ್ಕೀಡಾಗಿದೆ.


ಸರ್ಜಿಕಲ್ ಸ್ಟ್ರೈಕ್ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ವಾತಾವರಣವಿದ್ದಾಗ ಯುದ್ಧೋತ್ಸಾಹ ಇದ್ದವರು ಅಲ್ಲಿಗೇ ಹೋಗಲಿ. ಒಮ್ಮೆ ವಿಂಗ್ ಕಮಾಂಡರ್ ಅಭಿನಂದನ್ ಜೈನ್ ಸ್ಥಾನದಲ್ಲಿ ತಮ್ಮನ್ನು ಕಲ್ಪಿಸಿಕೊಳ್ಳಲಿ. ಬಳಿಕ ಮಾತನಾಡಿ. ನಮಗೆ ಶಾಂತಿ ಬೇಕು ಎಂದು ಪಲ್ಲವಿ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದರು. ಇದಕ್ಕೆ ಬಲಪಂಥೀಯರು ಭಾರೀ ವಿರೋಧ ವ್ಯಕ್ತಪಡಿಸಿದ್ದರು.

ತಮ್ಮ ಮೊದಲಿನ ಪೋಸ್ಟ್ ಗೆ ಸ್ಪಷ್ಟನೆ ಹಾಕಿದ ಪಲ್ಲವಿ, ಮತ್ತೆ ವಿವಾದ ಮಾಡಿಕೊಂಡಿದ್ದಾರೆ. ಅಭಿನಂದನ್ ಅವರನ್ನು ಪಾಕ್ ಗೌರವಯುತವಾಗಿ ನಡೆಸಿಕೊಂಡಿದೆ. ನಾಳೆ ಬಿಡುಗಡೆ ಮಾಡುತ್ತಾರೆ. ನಾವು ಶಾಂತಿ ಬಯಸುತ್ತೇವೆ. ಇದುವೇ ನನ್ನ ಮೊದಲಿನ ಹೇಳಿಕೆಗೆ ಸ್ಪಷ್ಟನೆ ಎಂದು ಪಲ್ಲವಿ ಬರೆದುಕೊಂಡಿದ್ದರು. ಆದರೆ ಅಭಿನಂದನ್ ಅವರನ್ನು ಪಾಕ್ ಗೌರವಯುತವಾಗಿ ನಡೆಸಿಕೊಂಡಿದೆ ಎಂದು ಪಲ್ಲವಿ ಬರೆದಿದ್ದಕ್ಕೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಾಕೆಂದರೆ ಅಭಿನಂದನ್ ಬಂಧಿಸಿದ ಕೂಡಲೇ ಪಾಕ್ ಅವರ ಮೇಲೆ ಹಲ್ಲೆ ನಡೆಸಿತ್ತು. ಇದು ಸ್ವತಃ ಪಾಕ್ ಬಿಡುಗಡೆ ಮಾಡಿದ ವಿಡಿಯೋದಲ್ಲಿ ಸ್ಪಷ್ಟವಾಗಿತ್ತು. ಆದರೆ ಹಲ್ಲೆ ನಡೆಸಿದ್ದಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖಂಡನೆ ವ್ಯಕ್ತವಾಗುತ್ತಿದ್ದಂತೆ, ಇನ್ನೊಂದು ವಿಡಿಯೋ ಮಾಡಿದ್ದ ಪಾಕ್ ಅಭಿನಂದನ್ ಬಳಿ ತನ್ನನ್ನು ಗೌರವಯುತವಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ಹೇಳಿಸಿತ್ತು. ಹೀಗಾಗಿಯೇ ಪಲ್ಲವಿ ಬರೆದುಕೊಂಡ ಹೇಳಿಕೆ ಈಗ ವಿವಾದಕ್ಕೀಡಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments