Webdunia - Bharat's app for daily news and videos

Install App

ರಸ್ತೆಯಲ್ಲೇ ಊಟ, ಅಹೋರಾತ್ರಿ ಧರಣಿ, ಸಾವಿರಾರು ವಾಹನ ತಡೆದ ರೈತರು!

Webdunia
ಶನಿವಾರ, 17 ನವೆಂಬರ್ 2018 (18:52 IST)
ಒಂದು ಕಡೆ ಮುಗಿಲು ಮುಟ್ಟಿದ ಆಕ್ರೋಶ ರೈತರಿಂದ ವ್ಯಕ್ತವಾಗುತ್ತಿದ್ದರೆ, ಇನ್ನೊಂದು ಕಡೆ ಹಗಲು ರಾತ್ರಿ ಪ್ರತಿಭಟನೆ ನಡೆಸಲಾಗುತ್ತಿದೆ. ಏತನ್ಮಧ್ಯೆ ಸಾವಿರಾರು ಕಬ್ಬು ತುಂಬಿದ ವಾಹನಗಳನ್ನು ತಡೆದು ರೈತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

ರೈತರ ಪ್ರತಿಭಟನೆ ನಡುವೆ ಸಕ್ಕರೆ ಕಾರ್ಖಾನೆಗಳು ಕಾರ್ಯಾರಂಭ ಮಾಡಿವೆ. ತಮ್ಮ ಹಿಂದಿನ ಘೋಷಿತ ಬೆಲೆ ಕೊಡುವವರೆಗೂ ಕಾರ್ಖಾನೆಗಳು ಆರಂಭವಾಗಲು ಬಿಡುವದಿಲ್ಲ ಅಂತ ಪಟ್ಟು ಹಿಡಿದ ರೈತರಿಂದ ರಸ್ತೆಯಲ್ಲಿ ಅಡುಗೆ ಅಲ್ಲೇ ಊಟ ಮತ್ತು ಅಹೋರಾತ್ರಿ ಧರಣಿ ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಮುರಗುಂಡಿ ಗ್ರಾಮದಲ್ಲಿ ನಡೆಯುತ್ತಿದೆ.

ಕಳೆದ ಒಂದು ವಾರದಿಂದ ಕಾರ್ಖಾನೆ ಮಾಲೀಕರು ಮತ್ತು ರೈತರ ನಡುವಿನ ಹಗ್ಗ ಜಗ್ಗಾಟ ನಿಲ್ಲುವ ಲಕ್ಷಣಗಳು ಮಾತ್ರ ಕಾಣುತ್ತಿಲ್ಲ. ಸರ್ಕಾರ ನಿಗದಿಪಡಿಸಿದ್ದಕ್ಕಿಂತ ಹೆಚ್ಚುವರಿ ಹಣ ಕೊಡ್ತೀವಿ ಅಂದ ಕಾರ್ಖಾನೆ ಮಾಲೀಕರು ಎರಡನೇ   ಹಂತದ ಹಣವನ್ನು ರೈತರಿಗೆ ನೀಡದೆ ಬಾಕಿ ಉಳಿಸಿಕೊಂಡಿವೆ. ಹೀಗಾಗಿ ಸದ್ಯ ರೈತರ ಆಕ್ರೋಶ ಮುಗಿಲು ಮುಟ್ಟುವಂತಾಗಿದ್ದು ರೈತರ ಅಳಲು ಮಾತ್ರ ಕಾರ್ಖಾನೆ ಮಾಲೀಕರಿಗೆ ಕೇಳುತ್ತಿಲ್ಲ.

ಇದರಿಂದ ರೈತರು ಅಲ್ಲಲ್ಲಿ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಬಾಕಿ ಹಣ ಕೊಡುವವರೆಗೆ ಕಬ್ಬು ಕಾರ್ಖಾನೆ ತಲುಪಲು ಬಿಡುವದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಎರಡ್ಮೂರು ಕಿಲೋಮೀಟರ್ ಗಟ್ಟಲೆ ವಾಹನಗಳು ನಿಲ್ಲುವಂತಾಗಿವೆ.

ಅಷ್ಟೇ ಅಲ್ಲದೇ ಕಳೆದ ಹದಿನೇಳು ದಿನಗಳಿಂದ ಉಗಾರದಲ್ಲಿ ಸೇತಕರಿ ಸಂಘಟನೆ, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಸೇರಿದಂತೆ ಹಲವು ಸಂಘಟನೆಗಳು ರಸ್ತೆಗೆ ಇಳಿದು ಹೋರಾಟ ಮಾಡುತ್ತಿವೆ. ಕಾರ್ಖಾನೆ ಮಾಲೀಕರು ಮಾತ್ರ ಎಪ್ ಆರ್ ಪಿ ದರ ಹೊರತು ಪಡಿಸಿ ಹೆಚ್ಚಿನ ಹಣ ನೀಡಲು ಮುಂದಾಗದೆ ಇರುವದು ಸದ್ಯ ರೈತರ ಆಕ್ರೋಶಕ್ಕೆ ಕಾರಣವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments