Webdunia - Bharat's app for daily news and videos

Install App

ಕೋವಿಡ್ ಲಸಿಕೆ ಪಡೆಯುವವರ ಪ್ರಮಾಣ ಹೆಚ್ಚಿಸಲು ಕ್ರಮ

Webdunia
ಮಂಗಳವಾರ, 30 ನವೆಂಬರ್ 2021 (20:57 IST)
ವಿದೇಶಗಳಿಂದ ರಾಜ್ಯಕ್ಕೆ ಪ್ರತಿ ದಿನ ಸುಮಾರು 2,500 ಪ್ರಯಾಣಿಕರು ಬಂದಿಳಿಯುತ್ತಿದ್ದು, ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಆರ್ ಟಿಪಿಸಿಆರ್ ಪರೀಕ್ಷೆ ಮಾಡಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
 
ವಿಧಾನಸೌಧದಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ವೈರಾಣು ಕಂಡುಬಂದಿರುವ ದೇಶಗಳಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಆರ್ ಟಿಪಿಸಿಆರ್ ಪರೀಕ್ಷೆ ನಡೆಸಲಾಗುತ್ತಿದೆ. ಯಾವುದೇ ದೇಶಗಳಿಂದ ಬಂದ ಪ್ರಯಾಣಿಕರಿಗೂ ಪರೀಕ್ಷೆ ನಡೆಸಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಪ್ರತಿ ದಿನ ಸುಮಾರು 2,500 ಪ್ರಯಾಣಿಕರು ವಿದೇಶಗಳಿಂದ ರಾಜ್ಯಕ್ಕೆ ಬರುತ್ತಿದ್ದಾರೆ. ನೆಗೆಟಿವ್ ಇದ್ದವರಿಗೆ ಏಳು ದಿನಗಳ ಕಾಲ ಮನೆ ಕ್ವಾರಂಟೈನ್ ಮಾಡಲಾಗುತ್ತದೆ. ರೋಗ ಲಕ್ಷಣವಿದ್ದರೂ, ನೆಗೆಟಿವ್ ಆದವರಿಗೆ 5ನೇ ದಿನ ಮತ್ತೆ ಮನೆಯಲ್ಲೇ ಪರೀಕ್ಷೆ ಮಾಡಲಾಗುತ್ತದೆ. ಎ ಸಿಂಪ್ಟಮ್ಯಾಟಿಕ್ ಆದವರಿಗೆ 7 ನೇ ದಿನ ಪರೀಕ್ಷೆ ಮಾಡಲಾಗುತ್ತದೆ. ಪಾಸಿಟಿವ್ ಬಂದರೆ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ಆದರೆ ಇಂಥವರನ್ನು ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುವುದು ಎಂದು ವಿವರಿಸಿದರು.
 
ಜಗತ್ತಿನ 12 ದೇಶಗಳಲ್ಲಿ ಕೋವಿಡ್ ನ ಹೊಸ ಓಮಿಕ್ರಾನ್ ವೈರಾಣು ಪತ್ತೆಯಾಗಿದೆ. ರಾಜ್ಯದಲ್ಲೂ ಇದು ಬರಬಹುದು ಎಂಬ ಉದ್ದೇಶದಿಂದ ಮುನ್ನೆಚ್ಚರಿಕೆ ಕ್ರಮ ವಹಿಸಲಾಗುತ್ತಿದೆ. ಜನಸಂಖ್ಯೆ, ಆರೋಗ್ಯ ಮೂಲಸೌಕರ್ಯಗಳನ್ನು ಪರಿಗಣಿಸಿದರೆ ಬೇರೆ ದೇಶಗಳಿಗಿಂತ ನಾವು ಹೆಚ್ಚು ಎಚ್ಚರ ವಹಿಸಬೇಕಾಗುತ್ತದೆ. ಇದಕ್ಕಾಗಿ ಆರೋಗ್ಯ ವ್ಯವಸ್ಥೆಯಲ್ಲಿ ಮಾಡಬೇಕಿರುವ ಸಿದ್ಧತೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಹಾಸಿಗೆ, ಆಕ್ಸಿಜನ್ ಹಾಸಿಗೆ, ವೈದ್ಯರು ಹಾಗೂ ಅಧಿಕಾರಿಗಳ ನಿಯೋಜನೆ, ಔಷಧಿ ಪೂರೈಕೆ ಮೊದಲಾದವುಗಳ ಬಗ್ಗೆ ಚರ್ಚೆಯಾಗಿದೆ. ಜನರು ಸುರಕ್ಷಿತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆಯಬೇಕಿದೆ. ಇದಕ್ಕಾಗಿ ಕೆಲ ಕ್ರಮಗಳನ್ನು ವಹಿಸಬೇಕೆಂದು ಸಲಹೆ ನೀಡಲಾಗಿದೆ. ಕೋವಿಡ್ ಲಸಿಕೆಯ ಎರಡನೇ ಡೋಸ್ ಅನ್ನು 41 ಲಕ್ಷ ಜನರು ಪಡೆಯಬೇಕಿದೆ. ಇದಕ್ಕಾಗಿ ಪ್ರಾಶಸ್ತ್ಯದಲ್ಲಿ ಲಸಿಕೆ ನೀಡಲಾಗುವುದು ಎಂದರು.
 
ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಂದಲೂ ಮಾದರಿಗಳನ್ನು ಪಡೆಯುತ್ತಿದೆ. ಪ್ರತಿ ಪ್ರಯಾಣಿಕರ ಸಂಪರ್ಕಿತರನ್ನು ಪತ್ತೆ ಮಾಡಿ ಪರೀಕ್ಷೆ ಮಾಡಲಾಗುತ್ತಿದೆ ಎಂದರು.
 
ಚಿಕಿತ್ಸೆಗೆ ಮಾರ್ಗಸೂಚಿ
 
ಓಮಿಕ್ರಾನ್ ವೈರಾಣು ಬಂದರೆ ಯಾವ ರೀತಿ ಎದುರಿಸಬೇಕು, ಹೇಗೆ ನಿಯಂತ್ರಿಸಬೇಕು, ಆಸ್ಪತ್ರೆ, ಮೆಡಿಕಲ್ ಕಾಲೇಜುಗಳಲ್ಲಿ ಸಿದ್ಧತೆಗಳು ಹೇಗಿದೆ ಎಂದು ಚರ್ಚಿಸಲಾಗಿದೆ. ಕ್ವಾರಂಟೈನ್ ಆ್ಯಪ್, ಟೆಲಿ ಮೆಡಿಸಿನ್ ಮೊದಲಾದ ತಂತ್ರಜ್ಞಾನಗಳನ್ನು ಬಳಸಿಕೊಳ್ಳಲು ಚರ್ಚೆಯಾಗಿದೆ. ಜೊತೆಗೆ ಚಿಕಿತ್ಸೆಗೆ ಪ್ರತ್ಯೇಕ ಮಾರ್ಗಸೂಚಿ ರೂಪಿಸಲು 10 ತಜ್ಞರನ್ನೊಳಗೊಂಡ ಸಮಿತಿ ರಚಿಸಲಾಗಿದೆ. ಈ ಸಮಿತಿಯು ಯಾವ ರೀತಿ ಚಿಕಿತ್ಸೆ ನೀಡಬೇಕೆಂದು ನಿಯಮ ರೂಪಿಸಲಿದೆ ಎಂದರು.
 
ಸಚಿವರು ಹೇಳಿದ ಇತರೆ ಅಂಶಗಳು
 
ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಮುಂದೆ ಬಂದು ಲಸಿಕೆ ಪಡೆಯಿರಿ.
 
ನಿರ್ದಿಷ್ಟ ದೇಶಗಳಿಂದ ಬರುವ ಪ್ರಯಾಣಿಕರಿಗೆ ಕೆಲ ನಿರ್ಬಂಧ ಹೇರುವಂತೆ ಮುಖ್ಯಮಂತ್ರಿಗಳು ಪ್ರಧಾನಿಗಳು ಪತ್ರ ಬರೆಯಲಿದ್ದಾರೆ. ವೈರಾಣು ಹರಡುವಿಕೆಯನ್ನು ಆರಂಭಿಕ ಹಂತದಲ್ಲೇ ತಡೆಯಲು ಪ್ರಯತ್ನ.
 
ಎರಡನೇ ಡೋಸ್ ಪಡೆಯದವರಿಗೆ ಮಾಲ್, ಥಿಯೇಟರ್ ಗೆ ಪ್ರವೇಶ ಇಲ್ಲ, ಖಾಸಗಿ ಆಸ್ಪತ್ರೆಯಲ್ಲಿ ಸರ್ಕಾರದಿಂದ ವೆಚ್ಚ ಭರಿಸುವ ತೀರ್ಮಾನ ಹಿಂತೆಗೆತ ಮೊದಲಾದ ಸಲಹೆಗಳು ಬಂದಿವೆ. ಈ ಬಗ್ಗೆ ಇನ್ನೂ ಚರ್ಚಿಸಬೇಕಿದೆ.
 
ಇಎಸ್‍ಐ ಆಸ್ಪತ್ರೆಯಲ್ಲಿ ರೋಗಿಯ ಶವದ ಕುರಿತಾದ ಸಮಸ್ಯೆ ಗಮನಕ್ಕೆ ಬಂದಿದ್ದು, ಈ ರೀತಿಯ ನಿರ್ಲಕ್ಷ್ಯ ವಹಿಸಬಾರದಿತ್ತು. ಇದು ಬಹಳ ವಿಷಾದನೀಯ ಸಂಗತಿ. ಈ ಬಗ್ಗೆ ಸೂಚನೆ ನೀಡಲಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments