ಬೆಂಗಳೂರಿನಲ್ಲಿ ಕಸ ಗುಡಿಸಲು ರಸ್ತೆಗಿಳಿದಿದೆ ಮೆಕ್ಯಾನಿಕಲ್ ಸ್ವೀಪಿಂಗ್ ಯಂತ್ರ

Webdunia
ಸೋಮವಾರ, 22 ಮೇ 2017 (18:11 IST)
ಇನ್ನು ಮುಂದೆ ಬೆಂಗಳೂರಿನ ರಸ್ತೆಗಳಲ್ಲಿ ಕಸಗುಡಿಸಲು ಮೆಕ್ಯಾನಿಕಲ್ ಸ್ವೀಪಿಂಗ್ ಮೆಷಿನ್ ಕಾರ್ಯನಿರ್ವಹಿಸಲಿದೆ.ಈ ಮೂಲಕ ರಸ್ತೆಗಳಲ್ಲಿನ ಕಸ ಹಾಗೂ ಧೂಳಿನ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಎಂಟು  ಬೃಹತ್ ಗಾತ್ರದ ಹಾಗೂ ಐದು ಮಧ್ಯಮ ಗಾತ್ರದ ಯಂತ್ರಗಳನ್ನು ಬಿಬಿಎಂಪಿ ಪರಿಚಯಿಸಿದೆ.
 
ವಿಧಾನಸೌಧದ ಮುಂಭಾಗ ಬಿಬಿಎಂಪಿ ಹಮ್ಮಿಕೊಂಡಿದ್ದ ಯಾಂತ್ರಿಕ ಕಸ ಗುಡಿಸುವ ಯಂತ್ರಗಳನ್ನು  ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಾರ್ವಜನಿಕರ ಉಪಯೋಗಕ್ಕೆ ಸಮರ್ಪಣೆ ಮಾಡಿದರು. 13ನೆ ಹಣಕಾಸು ಆಯೋಗದ ಅನುದಾನದಲ್ಲಿ ಈ ಯಾಂತ್ರಿಕವಾಗಿ ಕಸ ಗುಡಿಸುವ ಯಂತ್ರಗಳನ್ನು ಬಿಬಿಎಂಪಿ ವತಿಯಿಂದ ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲಾಗಿದೆ.
 
ಪ್ರತಿದಿನ ಸುಮಾರು 50 ಕಿ.ಮೀ. ರಸ್ತೆಗಳ ಕಸ ತೆರವುಗೊಳಿಸಲು ಹಾಗೂ ಧೂಳಿನ ಸಮಸ್ಯೆ ನೀಗಿಸಲು ಈ ಯಂತ್ರಗಳು ಉಪಯುಕ್ತವಾಗಿವೆ. ಜನದಟ್ಟಣೆಯಿಂದ ಕೂಡಿರುವ ನಗರದ ರಸ್ತೆಗಳು ಧೂಳುಮಯವಾಗಿದ್ದು, ರಸ್ತೆ ಬದಿಯಲ್ಲಿ ಶೇಖರಣೆಯಾಗುವ ಮರಳು, ಮಣ್ಣಿನಿಂದಾಗಿ ಬೇಸಿಗೆಯಲ್ಲಿ ಧೂಳೆದ್ದು, ವಾಹನ ಸವಾರರಿಗೆ ಸಾಕಷ್ಟು ತೊಂದರೆಯಾಗುತ್ತಿತ್ತು. ಮಳೆಗಾಲದಲ್ಲಿ ವಾಹನಗಳು ಸ್ಕಿಡ್ ಆಗಿ ಅವಘಡಗಳು ಸಂಭವಿಸುತ್ತಿದ್ದವು. ಇದಕ್ಕೆಲ್ಲ ಪರಿಹಾರವನ್ನು ಕಂಡುಕೊಳ್ಲುವ ನಿಟ್ಟಿನಲ್ಲಿ ಈ ಯಂತ್ರಗಳು ಕಾರ್ಯನಿರ್ವಹಿಸಲಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಸಿನ್ ಮಂಜುನಾಥ್ ಯಾವಾಗಲೂ ಹೇಳುವ ಆರು ಔಷಧಿಗಳು ಇವು

ಡಿಕೆ ಶಿವಕುಮಾರ್ ಗೆ ಠಕ್ಕರ್ ಕೊಡಲು ಸಿದ್ದರಾಮಯ್ಯ ಬಣದ ಭರ್ಜರಿ ಪ್ಲ್ಯಾನ್

ಸಿದ್ದರಾಮಯ್ಯಗೆ ಹೀಗ್ಯಾಕೆ ಮಾಡಿದ್ರು ಡಿಕೆ ಶಿವಕುಮಾರ್

ಆಪರೇಷನ್ ಸಿಂಧೂರ್ ಮೊದಲ ದಿನವೇ ಭಾರತವನ್ನು ಪಾಕಿಸ್ತಾನ ಸೋಲಿಸಿತ್ತು: ಕಾಂಗ್ರೆಸ್ ನಾಯಕ ಪೃಥ್ವಿರಾಜ್ ವಿವಾದ

Karnataka Weather: ವಿಪರೀತ ಚಳಿ ನಡುವೆ ಇಂದು ಈ ಜಿಲ್ಲೆಗಳಲ್ಲಿ ತುಂತುರು ಮಳೆ ಸಂಭವ

ಮುಂದಿನ ಸುದ್ದಿ
Show comments