Webdunia - Bharat's app for daily news and videos

Install App

ಕೇಂದ್ರ ಅಧ್ಯಯನ ತಂಡ ಭೇಟಿ ನೀಡಿ ನೆರೆಹಾನಿ ಪ್ರದೇಶದಲ್ಲಿ ಮಾಡಿದ್ದೇನು?

Webdunia
ಭಾನುವಾರ, 25 ಆಗಸ್ಟ್ 2019 (18:00 IST)
ಕೇಂದ್ರ ಸರ್ಕಾರದ  ನೆರೆಹಾನಿ ಅಧ್ಯಯನ ತಂಡದ ಸದಸ್ಯರು ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದ್ರು.

ಪ್ರವಾಹ ಸಂತ್ರಸ್ತರಿಗೆ ಆದಷ್ಟು ಬೇಗನೇ ಪರಿಹಾರ ಬಿಡುಗಡೆ ಮಾಡುವುದು ನಮ್ಮ ಆದ್ಯತೆಯಾಗಿದೆ ಎಂದು ಕೇಂದ್ರ ಸರ್ಕಾರದ  ನೆರೆಹಾನಿ ಅಧ್ಯಯನ ತಂಡದ ನೇತೃತ್ವ ವಹಿಸಿದ್ದ ಕೇಂದ್ರ ಗೃಹ ವ್ಯವಹಾರಗಳ ಇಲಾಖೆಯ ಆಡಳಿತ ವಿಭಾಗದ ಜಂಟಿ ನಿರ್ದೇಶಕರಾದ ಶ್ರೀ ಪ್ರಕಾಶ್ ತಿಳಿಸಿದ್ರು.

ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂಚರಿಸಿ ಹಾನಿಯನ್ನು ಪರಿಶೀಲಿಸಿದ ಬಳಿಕ, ಕಾಗವಾಡ ಸಮೀಪದ ಶೇಡಬಾಳ ಪ್ರವಾಸಿಮಂದಿರದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು.

ಕೇಂದ್ರ ತಂಡದ ಏಳು ಅಧಿಕಾರಿಗಳು ಮೊದಲ ದಿನವಾದ ಇಂದು ಬೆಳಗಾವಿ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಲ್ಲಿ ಸಂಚರಿಸಿ, ಹಾನಿಯನ್ನು ಪರಿಶೀಲಿಸಿದೆ.

ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದಿಂದ ಅತ್ಯಂತ ಕೆಟ್ಟ ಪರಿಸ್ಥಿತಿ ಕಂಡುಬಂದಿದೆ. ಕಬ್ಬಿನ ಬೆಳೆ ಭಾರೀ ಪ್ರಮಾಣದಲ್ಲಿ ಹಾನಿಯಾಗಿದ್ದು, ಸುಧಾರಣೆಗೆ ಸಾಕಷ್ಟು ಸಮಯ ಬೇಕು ಎಂದರು.

ಕೇಂದ್ರ ತಂಡದಿಂದ ಮತ್ತೊಮ್ಮೆ ಪರಿಶೀಲನೆ:

ಪ್ರವಾಹ ಮತ್ತು ಮಳೆಯಿಂದ ಉಂಟಾಗಿರುವ ಹಾನಿಯ ಬಗ್ಗೆ ರಾಜ್ಯ ಸರ್ಕಾರದ ಪರಿಹಾರ ಪ್ರಸ್ತಾವ ಆಧರಿಸಿ ಮತ್ತೊಮ್ಮೆ ಕೇಂದ್ರ ತಂಡವು ಪರಿಶೀಲನೆ ಕೈಗೊಳ್ಳಲಿದೆ. ಆ ತಂಡದ ವರದಿ ಆಧರಿಸಿ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆಗೆ ಸಂಬಂಧಿಸಿದಂತೆ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಶ್ರೀ ಪ್ರಕಾಶ್ ತಿಳಿಸಿದ್ರು.

ಬೆಳೆಹಾನಿಯ ಸಮೀಕ್ಷೆ ನಡೆದಿದ್ದು, ರಾಜ್ಯ ಸರ್ಕಾರದ ವರದಿಯನ್ನು ಆಧರಿಸಿ ಕೇಂದ್ರ ತಂಡದ ಮತ್ತೊಂದು ಭೇಟಿಯನ್ನು ನಿಗದಿಪಡಿಸಲಾಗುವುದು ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುನಾವಣಾ ರಾಜಕಾರಣಕ್ಕೆ ಸೋಮಣ್ಣ ನಿವೃತ್ತಿ: ದೇವರೇ ಹೇಳಿದರೂ ಸ್ಪರ್ಧಿಸಲ್ಲ ಎಂದು ಕೇಂದ್ರ ಸಚಿವ

Karnataka Weather: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಏಲ್ಲೆಲ್ಲಿ ಮಳೆ ಸಾಧ್ಯತೆ ಇಲ್ಲಿದೆ ಮಾಹಿತಿ

ಟ್ರಾಫಿಕ್‌ ಫೈನ್‌ ಆಫರ್‌ಗೆ ರಾಜಧಾನಿಯಲ್ಲಿ ಭರ್ಜರಿ ರೆಸ್ಪಾನ್ಸ್‌: ಮೊದಲ ದಿನ ವಸೂಲಿಯಾದ ದಂಡವೆಷ್ಟು ಗೊತ್ತಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಮುಂದಿನ ಸುದ್ದಿ
Show comments