Webdunia - Bharat's app for daily news and videos

Install App

ನೀರಾವರಿ ವಿವಾದ ಸಂಬಂಧ ಕಾನೂನು ತಂಡದೊಂದಿಗೆ ದೆಹಲಿಯಲ್ಲಿ ಸಭೆ: ಬೊಮ್ಮಾಯಿ

Webdunia
ಮಂಗಳವಾರ, 24 ಆಗಸ್ಟ್ 2021 (11:33 IST)
ಬೆಂಗಳೂರು: ಅಂತಾರಾಜ್ಯ ನೀರಾವರಿ ವಿವಾದ ಸಂಬಂಧ ಕಾನೂನು ತಂಡದೊಂದಿಗೆ ದೆಹಲಿಯಲ್ಲಿ ಸಭೆ ನಡೆಸುತ್ತೇವೆ. ಕರ್ನಾಟಕವನ್ನು ಪ್ರತಿನಿಧಿಸುವ ವಕೀಲರು ಸಹ ಆ ಸಭೆಯಲ್ಲಿ ಭಾಗಿಯಾಗುತ್ತಾರೆ. ಜಲ ವಿವಾದ ಬಗ್ಗೆ ಕಾನೂನು ತಜ್ಞರು ಮತ್ತು ವಕೀಲರ ಸಭೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ ನಾಲ್ಕೈದು ಸಚಿವರಗಳ ಬಳಿ ಸಮಯ ಕೇಳಿದ್ದೇನೆ. ಆರೋಗ್ಯ, ವಿತ್ತ, ರಕ್ಷಣೆ, ಕೃಷಿ ಮಂತ್ರಿಗಳ ಸಮಯ ಕೇಳಲಾಗಿದೆ. ಆ.25 ರ ಸಂಜೆ ದೆಹಲಿಗೆ ತೆರಳಿ 26ನೇ ತಾರೀಖು ಕೇಂದ್ರ ಸಚಿವರ ಭೇಟಿ ಮತ್ತು ಸಭೆಗಳನ್ನು ನಡೆಸುತ್ತೇನೆ ಎಂದರು.
ಟಾಸ್ಕ್ ಫೋರ್ಸ್ ರಚನೆ: ಸಚಿವರ ಟಾಸ್ಕ್ ಫೋರ್ಸ್ ಇನ್ನೂ ಪುನಾರಚನೆ ಮಾಡಿಲ್ಲ. ಇನ್ನಷ್ಟೇ ಟಾಸ್ಕ್ ಫೋರ್ಸ್ ರಚಿಸಬೇಕಿದೆ. ತಾಂತ್ರಿಕ ತಜ್ಞರ ಸಮಿತಿ ಮುಂದುವರೆಯಲಿದೆ. ಆಗಸ್ಟ್ 30 ಕ್ಕೆ ಸಚಿವರು, ಕೋವಿಡ್ ತಜ್ಞರ ಜತೆ ಸಭೆಯಿದೆ ಎಂದರು.
ಸಂಪುಟದಲ್ಲಿ ಬಾಕಿ ಉಳಿದ ನಾಲ್ಕು ಸ್ಥಾನಗಳ ಭರ್ತಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಷ್ಟ್ರೀಯ ಅಧ್ಯಕ್ಷರ ಜತೆಗೆ ಸಾಂದರ್ಭಿಕವಾಗಿ ಉಳಿದ ನಾಲ್ಕು ಸ್ಥಾನಗಳ ಭರ್ತಿ ಬಗ್ಗೆ ಚರ್ಚೆ ಮಾಡುತ್ತೇನೆ. ರಾಷ್ಟ್ರೀಯ ಅಧ್ಯಕ್ಷರ ಅಭಿಪ್ರಾಯ ಪಡೆದು ಮುಂದುವರೆಯುತ್ತೇನೆ ಎಂದರು.
ನೀರಾವರಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಖಂಡಿಸಿ ಜೆಡಿಎಸ್ ಪಾದಯಾತ್ರೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ನೆಲ ಜಲ ವಿಚಾರ ಬಂದಾಗ ರಾಜಕಾರಣ ಮಾಡಬಾರದು. ಹಿಂದೆ ನಾವೆಲ್ಲ ನೆಲ ಜಲ ವಿಚಾರದಲ್ಲಿ ಒಗ್ಗಟ್ಟಾಗಿ ಹೋರಾಡಿದ್ದೇವೆ. ಇದಕ್ಕೆ ಇತಿಹಾಸ ಸಾಕ್ಷಿ ಇದೆ. ಹಿಂದಿನ ಸಂದರ್ಭಗಳಲ್ಲಿ ಏನೇನಾಗಿದೆಯೆಂದು ತಿಳಿಯಲಿ. ಜೆಡಿಎಸ್ ನವರಿಗೆ ಪಾದಯಾತ್ರೆ ಮಾಡಲು ಸ್ವಾತಂತ್ರ್ಯ ಇದೆ. ಆದರೆ ನೆಲ ಜಲ ವಿಚಾರದಲ್ಲಿ ನಾವು ನಮ್ಮ ಹಕ್ಕನ್ನು ಪಡೆದುಕೊಳ್ಳಲು ಎಲ್ಲ ಪ್ರಯತ್ನ ಮಾಡುತ್ತೇವೆ. ಇದರಲ್ಲಿ ಅನುಮಾನವಿಲ್ಲ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments