Webdunia - Bharat's app for daily news and videos

Install App

ಅಂಗ‌ನವಾಡಿ ಕಾರ್ಯಕರ್ತೆಯರ ಜತೆ ಸಭೆ: ಲಕ್ಷ್ಮಿ ಹೆಬ್ಬಾಳ್ಕರ್ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ

Sampriya
ಬುಧವಾರ, 20 ಮಾರ್ಚ್ 2024 (16:17 IST)
Photo Courtesy Facebook
ಬೆಳಗಾವಿ: ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ಸಚಿವೆ ಲಕ್ಷ್ಮಿ ಹೆಬ್ಬಾಳಕರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಲಕ್ಷ್ಮಿ ಹೆಬ್ಬಾಳಕರ ತಮ್ಮ ಗೃಹಕಚೇರಿಯಲ್ಲಿ ಮಂಗಳವಾರ ನಡೆಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯ ಹಾಗೂ ಆಶಾ ಕಾರ್ಯಕರ್ತೆಯರ ಸಭೆಯನ್ನು ಚುನಾವಣಾಧಿಕಾರಿಗಳು ಅರ್ಧಕ್ಕೆ ಮೊಟಕುಗೊಳಿಸಿದರು. ಈ ಸಂಬಂಧ ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ.

ಲಕ್ಷ್ಮೀ ಅವರು ಗೃಹಕಚೇರಿಯಲ್ಲಿ 500ಕ್ಕೂ ಅಧಿಕ ಆಶಾ ಕಾರ್ಯಕರ್ತೆಯರನ್ನು ನೋಡಿ ಅಪರಿಚಿತರೊಬ್ಬರು ಚುನಾವಣಾಧಿಕಾರಿಗೆ ಮಾಹಿತಿಯನ್ನು ನೀಡಿದ್ದರು.

ಜಿಲ್ಲಾ ಚುನಾವಣಾಧಿಕಾರಿ ನಿತೇಶ್‌ ಪಾಟೀಲ ನೇತೃತ್ವದಲ್ಲಿ ಚುನಾವಣಾಧಿಕಾರಿಗಳು ಹಾಗೂ ಫ್ಲೈಯಿಂಗ್‌ ಸ್ಕ್ವಾಡ್‌ ಸಿಬ್ಬಂದಿ ದಾಳಿ ಮಾಡಿದರು. ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಕಾರ್ಯಕರ್ತೆಯರನ್ನು ಹೊರಗೆ ಕಳುಹಿಸಿದರು. ಹಲವರಿಂದ ಮಾಹಿತಿ ಸಂಗ್ರಹಿಸಿದರು. ಬಳಿಕ ಸಚಿವೆ ಲಕ್ಷ್ಮಿ ಅವರಿಂದಲೂ ವಿವರ ಪಡೆದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments