ಕೆಂದ್ರದ ಮಾಜಿ ಸಚಿವ, ತೆಲುಗು ಚಿತ್ರರಂಗದ ಖ್ಯಾತ ನಟ, ಮೆಗಾಸ್ಟಾರ್ ಚಿರಂಜೀವಿ ಅವರು ಇಂದು ನಗರಕ್ಕೆ ಆಗಮಿಸಿದ್ದು, ಡಾ. ರಾಜ್ ಕುಮಾರ್ ಅವರ ಸ್ಮರಣಾರ್ಥ ನಿರ್ಮಾಣಗೊಂಡಿರುವ ಸ್ಮಾರಕ ನಾಳೆ ಲೋಕಾರ್ಪಣೆಗೊಳ್ಳುತ್ತಿದ್ದು, ಸಮಾರಂಭದ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂದಿಳಿದ ನಟ ಚಿರಂಜೀವಿ ಅವರನ್ನು ಕರ್ನಾಟಕ ವಾಣಿಜ್ಯ ಮಂಡಳಿಯ ಅಧ್ಯಕ್ಷ ಟಿ. ಗಂಗರಾಜು ಹಾಗೂ ಸ್ಯಾಂಡಲ್ವುಡ್ ಚಿತ್ರ ತಂಡ ಅದ್ದೂರಿಯಾಗಿ ಸ್ವಾಗತಿಸಿತು.