Webdunia - Bharat's app for daily news and videos

Install App

ಕರ್ನಾಟಕ ಬಂದ್ : ತಮಿಳುನಾಡು ಧೋರಣೆ ಖಂಡಿಸಿ ವ್ಯಾಪಕ ಪ್ರತಿಭಟನೆ

Webdunia
ಶನಿವಾರ, 18 ಏಪ್ರಿಲ್ 2015 (11:47 IST)
ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸರ್ಕಾರದ ಧೋರಣೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳು  ಬೈಕ್ ರಾಲಿಗಳು ಮತ್ತು ಕಾಲ್ನಡಿಗೆಯ ಜಾಥಾ ನಡೆಸಿದ್ದಾರೆ. ಎಲ್ಲಾ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಟೌನ್ ಹಾಲ್ ಬಳಿ ಬಂದು ಸೇರುತ್ತಿದ್ದು, ಇನ್ನು ಸ್ವಲ್ಪ ಹೊತ್ತಿನಲ್ಲೇ ಪ್ರತಿಭಟನಾ ಮೆರವಣಿಗೆ ಆರಂಭವಾಗುತ್ತದೆ.

 ವಾಟಾಳ್  ನಾಗರಾಜ್  ಟೌನ್ ಹಾಲ್ ಬಳಿಗೆ ಸೈಕಲ್ ಏರಿ  ಆಗಮಿಸಿದಾಗ ಅವರ ಬೆಂಬಲಿಗರು ಅವರ ಹಿಂದೆಯೇ ಓಡಿಬಂದರು. ಕರವೇ ಕಾರ್ಯಕರ್ತರು ಮೇಕ್ರಿವೃತ್ತದಿಂದ ಟೌನ್‌ಹಾಲ್‌ಗೆ ಆಗಮಿಸಿದ್ದಾರೆ. ಸ್ಯಾಂಡಲ್ ವುಡ್ ತಂತ್ರಜ್ಞರು ಗಾಂಧಿನಗರದಿಂದ ಆಗಮಿಸಿದ್ದಾರೆ. ಟೌನ್‌ಹಾಲ್‌ನಿಂದ ಆರಂಭವಾಗುವ ಮೆರವಣಿಗೆ ಫ್ರೀಡಂಪಾರ್ಕ್‌ನಲ್ಲಿ ಮುಕ್ತಾಯವಾಗುತ್ತದೆ. ನಂತರ ಸಿಎಂ ಸಿದ್ದರಾಮಯ್ಯ ಅವರ ಬಳಿಗೆ ಒಂದು ನಿಯೋಗ ತೆರಳಿ ಮನವಿ ಸಲ್ಲಿಸಲಿದೆ. 

 ಈ ಸಂದರ್ಭದಲ್ಲಿ ಮೇಕೆದಾಟು ಯೋಜನೆಯನ್ನು ವಿರೋಧಿಸುತ್ತಿರುವ ತಮಿಳುನಾಡು ಸರ್ಕಾರದ ಧೋರಣೆಗೆ  ವ್ಯಾಪಕ ಖಂಡನೆ ವ್ಯಕ್ತವಾಗಿದೆ. ತಮಿಳುನಾಡು ಸಿಎಂ ಅಣಕು ಶವಯಾತ್ರೆ ನಡೆಸಿ ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ತಮಿಳುನಾಡು ಸರ್ಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಅವರು ಕೂಗಿದರು.  ರಾಮನಗರದಲ್ಲಿ ತಮಿಳುನಾಡು ವಿರುದ್ಧ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಇವರ ಪ್ರತಿಭಟನೆಯಲ್ಲಿ ಮೇಕೆಗಳನ್ನು ಕರೆತಂದು ಮೇಕೆದಾಟು ಯೋಜನೆಯನ್ನು ಜಾರಿಗೆ ತರಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments