Webdunia - Bharat's app for daily news and videos

Install App

ಮೇಕೆದಾಟು ಪಾದಯಾತ್ರೆ ಬಲು ಜೋರು

Webdunia
ಗುರುವಾರ, 3 ಮಾರ್ಚ್ 2022 (14:28 IST)
ಮಾರ್ಚ್ 3 ಮತ್ತೊಂದು ಇತಿಹಾಸ ಸೃಷ್ಟಿಯಾಗುವ ಸಮಯ. ಈ ಅಮೋಘ ಘಳಿಗೆಗೆ ನೀವು ಸಾಕ್ಷಿಯಾಗಬೇಕು ಎಂದು ಮೇಕೆದಾಟು ಪಾದಯಾತ್ರೆಯಲ್ಲಿ ನಿರತರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಾಜ್ಯದ ಜನರಿಗೆ ಕರೆ ಕೊಟ್ಟಿದ್ದಾರೆ. ಮೂರನೇ ತಾರೀಕು ಪಾದಯಾತ್ರೆ ಅಂತ್ಯ ಮಾಡಲಿದ್ದೇವೆ.
ರಾಜ್ಯದ ಉದ್ದಗಲಕ್ಕೂ ಕಾರ್ಯಕರ್ತರಿಗೆ ಮುಖಂಡರಿಗೆ ಮನವಿ ಮಾಡುತ್ತೇನೆ. ನೀವು ಮೂರನೇ ತಾರೀಖು ಬೆಳಗ್ಗೆ ಪ್ಯಾಲೆಸ್ಗೆ ಬಂದು ಅಲ್ಲಿಂದ ಪ್ಯಾಲೆಸ್ ನಿಂದ ಪಾದಯಾತ್ರೆಗೆ ಹೆಜ್ಜೆ ಹಾಕಬೇಕು. ಇದು ನಿಮಗೆ ಅನುಭವದ ಪಾಠ ನೀಡಲಿದೆ ಎಂದು ಕರುನಾಡಿಗೆ ಡಿಕೆ ಶಿವಕುಮಾರ್ ಕರೆ ನೀಡಿರುವ ವಿಡಿಯೋವನ್ನು ಕೂ ಮಾಡಲಾಗಿದೆ.
 
ವಿಡಿಯೋದಲ್ಲಿ ಡಿಕೆ ಶಿವಕುಮಾರ್, ಇದು ಒಂದು ಸಂಘಟನೆಗೆ ಮತ್ತು ಇತಿಹಾಸ ಪುಟಕ್ಕೆ ಎರಡಕ್ಕೂ ಸೇರುವ ಅವಕಾಶ ಇದೆ. ರಾಜ್ಯದ ಮೂಲೆ ಮೂಲೆಯಿಂದ ಸಂಘಟರು ಬನ್ನಿ. ಆರು ಕಿಲೋ ಮೀಟರ್ ಆದಮೇಲೆ ನ್ಯಾಷನಲ್ ಕಾಲೇಜಿಗೆ ಹೋಗುತ್ತೇವೆ. ನಾವು ನೀರಿಗಾಗಿ ನಡೆಯೋಣ. ಬನ್ನಿ ಹೆಜ್ಜೆ ಹಾಕಿ ಎಂದು ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.
 
ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಎರಡನೇ ದಿನದ ಪಾದಯಾತ್ರೆ ಆರಂಭಗೊಂಡಿದೆ. ಬಿಟಿಎಂ ಲೇಔಟ್ ಕ್ಷೇತ್ರದಿಂದ ಪಾದಯಾತ್ರೆ ಆರಂಭಗೊಂಡಿದ್ದು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಪ್ರಮುಖ ಮುಖಂಡರು ಭಾಗಿಯಾಗಿದ್ದಾರೆ. ಪಾದಯಾತ್ರೆಗೂ ಮುನ್ನ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗುರುವಾರದ ಪಾದಯಾತ್ರೆ ಇತಿಹಾಸ ಸೃಷ್ಟಿಸಲಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

ಮುಂದಿನ ಸುದ್ದಿ
Show comments