Webdunia - Bharat's app for daily news and videos

Install App

"ಮೇಕೆದಾಟು ಅಲ್ಲ ಎಣ್ಣೆ ಘಾಟು" - ಬಿಜೆಪಿ ವ್ಯಂಗ್ಯ

Webdunia
ಬುಧವಾರ, 2 ಮಾರ್ಚ್ 2022 (15:03 IST)
ಮೇಕೆದಾಟು ವಿಚಾರವಾಗಿ ಕಾಂಗ್ರೆಸ್ ನಡೆಸುತ್ತಿರುವ ಎರಡನೇ ಹಂತದ ಪಾದಯಾತ್ರೆಯಲ್ಲಿ ರಾಜಕೀಯ ಪುಡಾರಿಗಳ ದರ್ಬಾರು ಜೋರಾಗಿದ್ದು, "ಮೇಕೆದಾಟು - ಎಣ್ಣೆ ಘಾಟು" ಎಂದು ಬಿಜೆಪಿ ಟೀಕಿಸಿದೆ.
 
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, " ಅಡಿಗಡಿಗೊಂದು ತಂಪಾದ ಜ್ಯೂಸ್, ಐಸ್ ಕ್ರೀಮ್, ಎಳನೀರು, ಹಣ್ಣುಗಳು, ಬಾದಾಮಿ ಹಾಲು, ಮಜ್ಜಿಗೆ, ಇದು ಜಾತ್ರೆಯಲ್ಲ, ಇದು ಮೇಕೆದಾಟು ಪಾದಯಾತ್ರೆ!
ಸುಳ್ಳಿನಜಾತ್ರೆ ಗೆ ಬಂದವರಿಗೆಲ್ಲ ಹಣದ ಆಮಿಷ, ಇದು ಬಂಡೆ ‍& ಮಂಡೆ ಒಡೆದ ಹಣವಲ್ಲದೆ ಮತ್ತೇನು? ವಿಶೇಷವಾಗಿ, ಮೇಕೆದಾಟು - ಎಣ್ಣೆ ಘಾಟು" ಎಂದು ಆರೋಪಿಸಿದೆ.
 
"ಮೇಕೆದಾಟು ಯಾತ್ರೆ ಸುಳ್ಳಿನಜಾತ್ರೆ ಯಾಗಿ ಬದಲಾಗಿ ಈಗ ವೈಯುಕ್ತಿಕ ಪ್ರತಿಷ್ಠೆಯ ಕಣವಾಗುತ್ತಿದೆ. ಡಿಕೆಶಿ ಮತ್ತು ಸಿದ್ದರಾಮಯ್ಯ ಬಣಗಳು ಜಾಗ ಇದ್ದಲ್ಲೆಲ್ಲ ಫ್ಲೆಕ್ಸ್, ಬ್ಯಾನರ್‌, ಕಟೌಟು, ಮೂಲಕ ತಮ್ಮ ತಮ್ಮ ನಾಯಕರ ಗುಣಗಾನ ಮಾಡುತ್ತಿವೆ. ಹೆಸರಿಗಷ್ಟೇ ನೀರು, ಇಲ್ಲಿ ಬರೀ ರಾಜಕೀಯ ಪುಡಾರಿಗಳ ದರ್ಬಾರು "ಎಂದು ವ್ಯಂಗ್ಯವಾಡಿದೆ.
 
"ಮೂರು ದಿನಗಳ ಕಾಲ ಬೆಂಗಳೂರು ನಗರವಾಸಿಗಳು ಟ್ರಾಫಿಕ್‌ ಜಾಮ್‌ ಸಹಿಸಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷರು ಕಾಂಗ್ರೆಸ್‌ಟ್ರಾಫಿಕ್‌ ಬಾಂಬ್‌ ಎಸೆದಿದ್ದಾರೆ.1 ನಿಮಿಷ ಸಂಚಾರ ಅಸ್ತವ್ಯಸ್ತಗೊಂಡರೆ ಗಂಟೆಗಟ್ಟಲೆ ಬವಣೆಪಡಬೇಕಾದ ಈ ಸಮಯದಲ್ಲಿ 3 ದಿನ ತಡೆದುಕೊಳ್ಳುವುದು ಸುಲಭದ ಮಾತೇ? ಟ್ರಾಫಿಕ್‌ ಅನಾಹುತದ ಅರಿವಿದೆಯೇ? ಮಾನ್ಯ ಡಿಕೆಶಿಯವರೇ , 6 ದಶಕಗಳ ಕಾಲ ಕಾಂಗ್ರೆಸ್‌ ಪಕ್ಷವನ್ನು ಸಹಿಸಿಕೊಂಡಿದ್ದಕ್ಕೆ, ದೇಶ ಇನ್ನೂ ತೊಂದರೆ ಅನುಭವಿಸುತ್ತಿದೆ. ನಿಮ್ಮ ರಾಜಕೀಯ ಲಾಭಕ್ಕೆ ಬೆಂಗಳೂರಿನ ಜನತೆಯನ್ನು ಕಷ್ಟಕ್ಕೆ ದೂಡಿ, ಮೂರು ದಿನ ತಡೆದುಕೊಳ್ಳಿ ಎಂದು ಬಿಟ್ಟಿ ಸಲಹೆ ನೀಡುತ್ತಿದ್ದೀರಿ.ಜನತೆ ನಿಮ್ಮನ್ನು ಕ್ಷಮಿಸುವರೇ?" ಎಂದು ಬಿಜೆಪಿ ಪ್ರಶ್ನಿಸಿದೆ.
 
ಅಡಿಗಡಿಗೊಂದು ತಂಪಾದ ಜ್ಯೂಸ್, ಐಸ್ ಕ್ರೀಮ್, ಎಳನೀರು, ಹಣ್ಣುಗಳು, ಬಾದಾಮಿ ಹಾಲು, ಮಜ್ಜಿಗೆ, ಇದು ಜಾತ್ರೆಯಲ್ಲ, ಇದು ಮೇಕೆದಾಟು ಪಾದಯಾತ್ರೆ!#ಸುಳ್ಳಿನಜಾತ್ರೆ ಗೆ ಬಂದವರಿಗೆಲ್ಲ ಹಣದ ಆಮಿಷ, ಇದು ಬಂಡೆ ‍& ಮಂಡೆ ಒಡೆದ ಹಣವಲ್ಲದೆ ಮತ್ತೇನು?

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments