Webdunia - Bharat's app for daily news and videos

Install App

ಮೇಕೆದಾಟು ಪಾದಯಾತ್ರೆ ಪ್ರಾರಂಭ

Webdunia
ಭಾನುವಾರ, 9 ಜನವರಿ 2022 (14:11 IST)
ಕುಡಿಯುವ ನೀರಿನ ಸಲುವಾಗಿ ಮೇಕೆದಾಡು ಯೋಜನೆ ಅನುಷ್ಠಾನಕ್ಕಾಗಿ ಒತ್ತಾಯಿಸಿ ನೀರಿಗಾಗಿ ನಡಿಗೆ ಹಮ್ಮಿಕೊಳ್ಳಲಾಗಿದೆ. ಇದು ಪಕ್ಷಾತೀತ ಕಾರ್ಯಕ್ರಮವಾಗಿದ್ದು, ನಾವೆಲ್ಲರೂ ಬೆಂಗಳೂರು ತನಕ ನಡೆದೇ ನಡೆಯುತ್ತೇವೆ ಎಂಬ ವಿಶ್ವಾಸವನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸಂಗಮದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಪೂರ್ವದಿಂದಲೂ ಹೋರಾಟಗಳನ್ನು ಮಾಡಿಕೊಂಡೇ ಬಂದಿದೆ. ನಮಗೆ ಹೋರಾಟ ಹೊಸದಲ್ಲ, ಮೇಕೆದಾಟು ಯೋಜನೆ ಶೀಘ್ರ ಜಾರಿಯಾಗಬೇಕು. ಕುಡಿಯುವ ನೀರಿನ ಬವಣೆ ನೀಗಬೇಕು ಎಂಬುದು ನಮ್ಮ ನಿಲುವು ಎಂದರು.
 
ಮೇಕೆದಾಟು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲು ಈಗಾಗಲೇ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಮೇಕೆದಾಟುವಲ್ಲಿ ಸೇರಿದ್ದಾರೆ. ಪಕ್ಷದ ಅಧ್ಯಕ್ಷ ಡಿಕೆ ಶಿವಕುಮಾರ್ ಕಾವೇರಿ ನದಿಗೆ ವಿದ್ಯುಕ್ತವಾಗಿ ಪೂಜೆ ಮಾಡಿ ಪಾದಯಾತ್ರೆಗಾಗಿ ವಿನ್ಯಾಸ ಮಾಡಿರುವ ಬಾವುಟ ಹಿಡಿದು ತೆಪ್ಪದ ಮೂಲಕ ನದಿ ದಡದ ಸನಿಹ ಸುತ್ತು ಬಂದಿದ್ದಾರೆ.
 
ಆರಂಭದ ದಿನ 15 ಕಿ. ಮೀ. ನಡೆಯುವ ಯೋಜನೆಯನ್ನು ಕಾಂಗ್ರೆಸ್ ನಾಯಕರು ಹಾಕಿಕೊಂಡಿದ್ದಾರೆ. ಭಾಗವಹಿಸುವ ಎಲ್ಲರಿಗೂ ಉಪಹಾರ, ಭೋಜನದ ವ್ಯವಸ್ಥೆ ಮಾಡಲಾಗಿದೆ. ರಾಜ್ಯ ಸರ್ಕಾರ ಕೋವಿಡ್ ನಿಯಮಾವಳಿಗಳನ್ನು ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸಹಸ್ರಾರು ಮಂದಿ ಭಾಗವಹಿಸುತ್ತಿರುವ ಪಾದಯಾತ್ರೆಗೆ ಅವಕಾಶ ನೀಡುತ್ತದೆಯೇ ಎಂಬ ಪ್ರಶ್ನೆಯೂ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದ್ವಿತೀಯ ಪಿಯುಸಿ ನಂತರ ಮನೆಯಿಂದಲೇ ಕೆಲಸ ಮಾಡಲು ಲಭ್ಯವಿರುವ ಅವಕಾಶಗಳು

ಬಿಜೆಪಿ ಬಳ್ಳಾರಿ ಪಾದಯಾತ್ರೆ 2 ನೇ ದಿನ: ಸರ್ಕಾರ ರಾಜೀನಾಮೆ ಬಿಸಾಕಿ ಚುನಾವಣೆ ಎದುರಿಸಲಿ ಎಂದ ವಿಜಯೇಂದ್ರ

ಎಮ್ಮೆಗೂ ವಾಹನ ಯೋಗ… ಹಾಲು ಮಾರಲು ಎಮ್ಮೆಯನ್ನೇ ಬೈಕ್ ನಲ್ಲಿ ಕೂರಿಸಿಕೊಂಡ ಹೊರಟ ಮಾಲಿಕ Video

ತಮಿಳುನಾಡಿನ ದೇವಾಲಯಗಳಲ್ಲಿ ಮೊಬೈಲ್ ಬ್ಯಾನ್: ವಿಜಯ್ ಸರ್ಕಾರದ ಹೊಸ ನಿಯಮ ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments