Webdunia - Bharat's app for daily news and videos

Install App

ಮೆಕನ್ ಚಂಡುಮಾರುತ ಹಾವಳಿಗೆ ತತ್ತರಿಸಿದ ಉಡುಪಿ

Webdunia
ಮಂಗಳವಾರ, 29 ಮೇ 2018 (18:39 IST)
ಕಳೆದೆರಡು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಗುಡುಗು‌ ಮಿಂಚು ಸಹಿತ ಮಳೆ ಹಲವಾರು ಅನಾಹುತಗಳನ್ನು ಸೃಷ್ಟಿ ಮಾಡಿದೆ.
ರಾತ್ರಿ ಹೊತ್ತಲ್ಲಿ ಸುರಿದ ಭಾರೀ ಗಾಳಿ ಮಳೆಗೆ ಜಿಲ್ಲಾದ್ಯಾಂತ ಹಲವು ಮರಗಳು ಧರೆಗುಳಿದಿದೆ.ಕೆಲವೊಂದು‌ ಮರಗಳು ಮನೆ ಮೇಲೆ ಉರುಳಿದ್ದು ಅಪಾರ ಅಸ್ತಪಾಸ್ತಿ ನಷ್ಟ ಉಂಟಾಗಿದೆ.ರಸ್ತೆ ಬದಿಗಳಲ್ಲಿ ಇದ್ದ ಮರಗಳು ವಿದ್ಯೂತ್ ತಂತಿಗಳ ಮೇಲೆ  ಬಿದ್ದು ವಿದ್ಯೂತ್ ಕಂಬಗಳು ಮುರಿದು ಬಿದ್ದಿದ್ದು, ಮೆಸ್ಕಾಂ ಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
 
ಇದರಿಂದಾಗಿ‌ ಉಡುಪಿಯ ಹೆಚ್ಚಿನ‌ ಕಡೆಗಳಲ್ಲಿ ಎರಡು ದಿನಗಳಿಂದ ವಿದ್ಯೂತ್ ಇಲ್ಲದೇ ಕತ್ತಲ್ಲಲ್ಲಿ ಕಳೆಯುವಂತಾಗಿದೆ. ಬೃಹತ್ ಕಂಬಗಳು ಹಾಗೂ ಮರಗಳು ರಸ್ತೆಗುರುಳಿದ ಪರಿಣಾಮ ಹಲವು ಕಡೆ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
 
ಇನ್ನೂ ಗುಡುಗು ಸಿಡಿಲಿನ ಅಬ್ಬರ ಜೋರಾಗಿದ್ದು ಸಿಡಿಲಿನಬ್ಬರಕ್ಕೆ ಕಾರ್ಕಳದ ಬೈಲೂರಿನಲ್ಲಿ ಒಬ್ಬ ಮಹಿಳೆ ಮೃತರಾಗಿದ್ದಾರೆ.ಬೈಲೂರಿಮಾಜಿ ಗ್ರಾಮ ಪಂಚಾಯತ್ ಸದಸ್ಯೆ ಶೀಲಾ ಎಂಬವರು ಸಿಡಿಲಿಗೆ ಬಲಿಯಾಗಿದ್ದು ,ಜೊತೆಯಲ್ಲಿ ಮಲಗಿದ್ದ ಪತಿ ಗಂಭೀರಾ ಗಾಯಗೊಂಡು ಕಾರ್ಕಳ ಸರ್ಕಾರಿ ಅಸ್ಪತ್ರೆಗೆ ದಾಖಲಾಗಿದ್ದಾರೆ.
 
ತುರ್ತು ನಿರ್ವಹಣೆಗೆ ಜಿಲ್ಲಾಡಳಿತ ಸಕಲ ಕ್ರಮಗಳನ್ನು ಕೈಗೊಂಡಿದ್ದು,ಅಗ್ನಿ ಶಾಮಕ ದಳ ಸೇರಿದಂತೆ ಎಲ್ಲಾ  ಇಲಾಖೆ ಗಳು ಮಳೆ ಪರಿಹಾರಕ್ಕೆ ಸಿದ್ದರಾಗಿರುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments