Webdunia - Bharat's app for daily news and videos

Install App

ಮಾನಸಿಕ ಅಸ್ವಸ್ಥನಾದ ಯುವಕ ಗುಣಮುಖನಾಗಿ ಮರಳಿ ಕುಟುಂಬ ಸೇರಿದ

Webdunia
ಭಾನುವಾರ, 11 ಸೆಪ್ಟಂಬರ್ 2022 (16:31 IST)
ಉತ್ತರಪ್ರದೇಶದ ಅಲಹಾಬಾದ್​ನ ಮೊಹಮ್ಮದ್ ಆಯುಬ್ ಎಂಬವರ ಪುತ್ರ ಶಿಬು ಯಾನೆ ಮೊಹಮ್ಮದ್ ತೊಯಿಬ್ ಎಂಬ ಯುವಕ ಮಂಗಳೂರಿನ ವೈಟ್ ಡೌಸ್​ನಲ್ಲಿ ಮಾನಸಿಕ ಅಸ್ವಸ್ಥತೆಯಿಂದ ಗುಣಮುಖನಾಗಿದ್ದಾನೆ.
 
ಅಲಹಾಬಾದ್​ನ ಶಿಬು ಶಿವಕಾಶಿಯಲ್ಲಿ ಕ್ಯಾಲೆಂಡರ್ ತಯಾರಿಸುವ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈತನ ಸೋದರಿಗೆ ಮದುವೆ ನಿಶ್ಚಯವಾಗಿತ್ತು. ಆಕೆಯ ಮದುವೆಯ ಬಳಿಕ ಈತನಿಗೂ ಮದುವೆ ಮಾಡಲು ಯುವತಿ ನೋಡಲಾಗಿತ್ತು. ಮದುವೆಯ ತಯಾರಿಯ ಹಿನ್ನೆಲೆಯಲ್ಲಿ ಶಿಬು ತಾನು ಕೆಲಸ ಮಾಡುವ ಸಂಸ್ಥೆಯಲ್ಲಿ ರಜೆ ಮತ್ತು ದುಡಿದ ಹಣ ಕೇಳಿದ್ದ. ಆದರೆ ಸಂಸ್ಥೆ ಎರಡನ್ನೂ ನೀಡಲು ನಿರಾಕರಿಸಿತ್ತು.
 
ಇದರಿಂದ ದಿಗಿಲುಗೊಂಡ ಈತ ರೈಲ್ವೆ ಸ್ಟೇಷನ್​ಗೆ ಹೋಗಿ ರೈಲು ಹತ್ತಿದ್ದಾನೆ. ತೀರಾ ಆತಂಕದಿಂದ ಮಾನಸಿಕ ಸ್ಥಿಮಿತ ಕಳೆದುಕೊಂಡು ಅಸ್ವಸ್ಥನಾಗಿದ್ದಾನೆ. ಹೀಗೆ ರೈಲು ಹತ್ತಿ ಬಂದವನು ಮಂಗಳೂರು ತಲುಪಿದ್ದಾನೆ. ಮಂಗಳೂರು ನಗರದಲ್ಲಿ ಸುಮಾರು ನಾಲ್ಕು ದಿನಗಳಿಂದ ಮಾನಸಿಕ ಅಸ್ವಸ್ಥನಾಗಿ ಬೀದಿ ಬೀದಿ ಅಳೆಯುತ್ತಿದ್ದ ಈತನನ್ನು 2019 ಮೇ ತಿಂಗಳಲ್ಲಿ ನಿರ್ಗತಿಕರಿಗೆ ನೆರವಾಗುವ ನಗರದ ವೈಟ್ ಡೌಸ್ ಸಂಸ್ಥೆಯ ಕೊರಿನ್ ರಸ್ಕಿನ್ ಅವರು ಗಮನಿಸಿ ತಮ್ಮ ಸಂಸ್ಥೆಗೆ ಕರೆದುಕೊಂಡು ಬಂದು ಚಿಕಿತ್ಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments