Webdunia - Bharat's app for daily news and videos

Install App

ಮಾನಸಿಕ ಅಸ್ವಸ್ಥನಾದ ಯುವಕ ಗುಣಮುಖನಾಗಿ ಮರಳಿ ಕುಟುಂಬ ಸೇರಿದ

Webdunia
ಭಾನುವಾರ, 11 ಸೆಪ್ಟಂಬರ್ 2022 (16:31 IST)
ಉತ್ತರಪ್ರದೇಶದ ಅಲಹಾಬಾದ್​ನ ಮೊಹಮ್ಮದ್ ಆಯುಬ್ ಎಂಬವರ ಪುತ್ರ ಶಿಬು ಯಾನೆ ಮೊಹಮ್ಮದ್ ತೊಯಿಬ್ ಎಂಬ ಯುವಕ ಮಂಗಳೂರಿನ ವೈಟ್ ಡೌಸ್​ನಲ್ಲಿ ಮಾನಸಿಕ ಅಸ್ವಸ್ಥತೆಯಿಂದ ಗುಣಮುಖನಾಗಿದ್ದಾನೆ.
 
ಅಲಹಾಬಾದ್​ನ ಶಿಬು ಶಿವಕಾಶಿಯಲ್ಲಿ ಕ್ಯಾಲೆಂಡರ್ ತಯಾರಿಸುವ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈತನ ಸೋದರಿಗೆ ಮದುವೆ ನಿಶ್ಚಯವಾಗಿತ್ತು. ಆಕೆಯ ಮದುವೆಯ ಬಳಿಕ ಈತನಿಗೂ ಮದುವೆ ಮಾಡಲು ಯುವತಿ ನೋಡಲಾಗಿತ್ತು. ಮದುವೆಯ ತಯಾರಿಯ ಹಿನ್ನೆಲೆಯಲ್ಲಿ ಶಿಬು ತಾನು ಕೆಲಸ ಮಾಡುವ ಸಂಸ್ಥೆಯಲ್ಲಿ ರಜೆ ಮತ್ತು ದುಡಿದ ಹಣ ಕೇಳಿದ್ದ. ಆದರೆ ಸಂಸ್ಥೆ ಎರಡನ್ನೂ ನೀಡಲು ನಿರಾಕರಿಸಿತ್ತು.
 
ಇದರಿಂದ ದಿಗಿಲುಗೊಂಡ ಈತ ರೈಲ್ವೆ ಸ್ಟೇಷನ್​ಗೆ ಹೋಗಿ ರೈಲು ಹತ್ತಿದ್ದಾನೆ. ತೀರಾ ಆತಂಕದಿಂದ ಮಾನಸಿಕ ಸ್ಥಿಮಿತ ಕಳೆದುಕೊಂಡು ಅಸ್ವಸ್ಥನಾಗಿದ್ದಾನೆ. ಹೀಗೆ ರೈಲು ಹತ್ತಿ ಬಂದವನು ಮಂಗಳೂರು ತಲುಪಿದ್ದಾನೆ. ಮಂಗಳೂರು ನಗರದಲ್ಲಿ ಸುಮಾರು ನಾಲ್ಕು ದಿನಗಳಿಂದ ಮಾನಸಿಕ ಅಸ್ವಸ್ಥನಾಗಿ ಬೀದಿ ಬೀದಿ ಅಳೆಯುತ್ತಿದ್ದ ಈತನನ್ನು 2019 ಮೇ ತಿಂಗಳಲ್ಲಿ ನಿರ್ಗತಿಕರಿಗೆ ನೆರವಾಗುವ ನಗರದ ವೈಟ್ ಡೌಸ್ ಸಂಸ್ಥೆಯ ಕೊರಿನ್ ರಸ್ಕಿನ್ ಅವರು ಗಮನಿಸಿ ತಮ್ಮ ಸಂಸ್ಥೆಗೆ ಕರೆದುಕೊಂಡು ಬಂದು ಚಿಕಿತ್ಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments