Webdunia - Bharat's app for daily news and videos

Install App

ಮರ್ಸಿಡೆಸ್​ ಕಾರಿಗೆ ಬೆಂಕಿಯಿಟ್ಟ ಗಾರೆ ಕೆಲಸದ ಮೇಸ್ತ್ರಿ

Webdunia
ಗುರುವಾರ, 15 ಸೆಪ್ಟಂಬರ್ 2022 (15:14 IST)
ಕಟ್ಟಡವೊಂದರ ಹೊರಭಾಗದಲ್ಲಿ ಪಾರ್ಕ್​ ಮಾಡಿದ್ದ ದುಬಾರಿ ಬೆಲೆಯ ಮರ್ಸಿಡೆಸ್​ ಕಾರಿಗೆ ಬೆಂಕಿಯಿಟ್ಟ ಗಾರೆ ಕೆಲಸದ ಮೇಸ್ತ್ರಿ ಹಾಗೂ ಟೈಲ್ಸ್​​ ಪೂರೈಕೆದಾರನನ್ನು ನೋಯ್ಡಾ ಪೊಲೀಸರು ಬುಧವಾರ (ಸೆ. 14) ಬಂಧಿಸಿದ್ದಾರೆ.
 
ಈ ಘಟನೆ ನೋಯ್ಡಾದ ಸೆಕ್ಟರ್​ 45ರಲ್ಲಿ ನಡೆದಿದ್ದು, ಮನೆ ಮಾಲೀಕ ಅಳವಡಿಸಿರುವ ಸಿಸಿಟಿವಿಯಲ್ಲಿ ಕಾರಿಗೆ ಬೆಂಕಿ ಇಡುವ ದೃಶ್ಯ ಸೆರೆಯಾಗಿದೆ.
ಆರೋಪಿಯನ್ನು ರಣವೀರ್​ ಎಂದು ಗುರುತಿಸಲಾಗಿದೆ. ಗಾರೆ ಕೆಲಸದ ಮೇಸ್ತ್ರಿ ಹಾಗೂ ಟೈಲ್ಸ್​ ಪೂರೈಕೆದಾರನಾಗಿ ಕೆಲಸ ಮಾಡುತ್ತಿದ್ದ ರಣವೀರ್,​ ಕಾರು ಮಾಲೀಕನ ಮನೆಗೆ ಟೈಲ್ಸ್​ ತಂದು ಅಳವಡಿಸಿದ. ಆದರೆ, ಸ್ವಲ್ಪ ಹಣವನ್ನು ನೀಡಿದ್ದ ಮಾಲೀಕ 2 ಲಕ್ಷ ರೂಪಾಯಿ ಹಣವನ್ನು ಬಾಕಿ ಉಳಿಸಿಕೊಂಡಿದ್ದ. ಸಾಕಷ್ಟು ಬಾರಿ ಕೇಳಿದರು ಬಾಕಿ ಹಣ ಕೊಡದೇ ಸತಾಯಿಸಿದ್ದರಿಂದ ರೋಸಿ ಹೋದ ರಣವೀರ್​, ಮನೆ ಮಾಲೀಕನ 1 ಕೋಟಿ ಮೌಲ್ಯದ ಮರ್ಸಿಡೆಸ್​ ಕಾರಿಗೆ ಬೆಂಕಿಯಿಟ್ಟಿದ್ದಾಗಿ ಪೊಲೀಸರ ಬಳಿ ಹೇಳಿದ್ದಾರೆ.
 
ಹೆಲ್ಮೆಟ್​ ಧರಿಸಿ ಬೈಕ್​ ಸಮೀಪ ನಿಂತಿದ್ದ ರಣವೀರ್​, ಆ ಪ್ರದೇಶದಲ್ಲಿ ಯಾರು ಇಲ್ಲದಿರುವುದನ್ನು ಖಚಿತಪಡಿಸಿಕೊಂಡು, ಕಾರಿನ ಬಳಿಕ ತೆರೆಳಿ ಕಾರಿನ ಮುಂಭಾಗಕ್ಕೆ ಬೆಂಕಿ ಹಚ್ಚಿ, ಬೈಕ್​ ಏರಿ ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
 
ಸುಡುವ ದ್ರವವನ್ನು ಸುರಿದು ಕಾರಿಗೆ ಬೆಂಕಿ ಹಚ್ಚಿದ್ದಾನೆ. ಪೊಲೀಸ್​ ಮೂಲಗಳ ಪ್ರಕಾರ ಈ ಘಟನೆ ಭಾನುವಾರ (ಸೆ.11) ನಡೆದಿರುವುದಾಗಿ ತಿಳಿದುಬಂದಿದೆ. ಆ ಪ್ರದೇಶದಲ್ಲಿದ್ದ ಜನರು ಬೆಂಕಿ ಹೊತ್ತುಕೊಂಡಿರುವ ಕಾರನ್ನು ನೋಡಿ ಮಾಲೀಕರಿಗೆ ಎಚ್ಚರಿಕೆ ನೀಡಿದಾದರೂ ಅಷ್ಟರಲ್ಲಾಗಲೇ ಕಾರಿರ ತುಂಬಾ ಹಾನಿಯಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

Kasargodu: ಬಾಲ್ಯದ ಘಟನೆಗೆ 50 ವರ್ಷಗಳ ಬಳಿಕ ಪ್ರತೀಕಾರ ತೀರಿಸಿಕೊಂಡ ವ್ಯಕ್ತಿ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಮುಂದಿನ ಸುದ್ದಿ
Show comments