Webdunia - Bharat's app for daily news and videos

Install App

ನೆರೆ ಪೀಡಿತರಿಗೆ ವರ್ತಕರ ಸಹಾಯ ಹಸ್ತ

Webdunia
ಮಂಗಳವಾರ, 21 ಆಗಸ್ಟ್ 2018 (16:25 IST)
ಸತತ ಮಳೆಯಿಂದ ಜಲಾಶಯಗಳು ಭರ್ತಿಗೊಂಡು, ಕಾವೇರಿ ನದಿ ಪಾತ್ರದ ಜನರು ಸಂಕಷ್ಟದಲ್ಲಿದ್ದಾರೆ. ನೆರೆ ಪೀಡಿತ ಗ್ರಾಮದ ಜನರಿಗೆ ಗಡಿ ಜಿಲ್ಲೆಯಿಂದ ವರ್ತಕರ ಸಂಘದ ಸದಸ್ಯರು ಸಹಾಯ ಹಸ್ತ ಚಾಚಿದ್ದಾರೆ.

ಚಾಮರಾಜನಗರ ಪಟ್ಟಣದ ವರ್ತಕರ ಸಂಘದ ಸದಸ್ಯರು ಪ್ರವಾಹ ಸಂತ್ರಸ್ಥರಿಗೆ ಸಹಾಯ ಹಸ್ತ ಚಾಚಿದ್ದಾರೆ.
ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ಭಾಗದ ಕಾವೇರಿ ನದಿ ತೀರದ ದಾಸನಪುರ, ಹಳೆ ಅಣಗಳ್ಳಿ, ಹಂಪಾಪುರ, ಹರಳೆ, ಮುಳ್ಳೂರು, ಯಡಕುರಿಯಾ ಸೇರಿದಂತೆ ಹತ್ತಕ್ಕೂ ಹೆಚ್ಚಿನ ಹಳ್ಳಿಗಳು ಜಲಾವೃತಗೊಂಡಿವೆ. ಅಲ್ಲಿನ ಗ್ರಾಮಸ್ಥರು ಇದೀಗ ತೀವ್ರ ಸಂಕಷ್ಟದಲ್ಲಿದ್ದಾರೆ. ನೆರೆ ಪೀಡಿತರಿಗೆ ಕೊಳ್ಳೆಗಾಲ ಪಟ್ಟಣದಲ್ಲಿ ನಿರಾಶ್ರಿತ ಕೇಂದ್ರ ತೆರೆಯಲಾಗಿದೆ.
ದಾಸನಪುರ, ಹಳೆ ಅಣಗಳ್ಳಿ ಗ್ರಾಮದ ಸುಮಾರು ಏಳನೂರಕ್ಕೂ ಹೆಚ್ಚಿನ ಜನ ಕೊಳ್ಳೆಗಾಲದ ಮಹದೇಶ್ವರ ಕಾಲೇಜು ಬಳಿಯ ಬಾಲಕರ ವಸತಿ ನಿಲಯದ ನಿರಾಶ್ರಿತ ಕೇಂದ್ರಲ್ಲಿದ್ದಾರೆ. ನಿರಾಶ್ರಿತ ಜನರ ಬವಣೆ ನೀಗಿಸಲು ಚಾಮರಾಜನಗರ ಪಟ್ಟಣದ ವರ್ತಕರ ಸಂಘವೂ ಸಹಾಯ ಹಸ್ತ ಚಾಚಿದೆ. 

ನಿರಾಶ್ರಿತರಿಗಾಗಿ ಬೆಡ್ ಶೀಟ್, ಚಾಪೆ, ನೀರಿನ ಬಾಟಲ್, ಪ್ರಾಥಮಿಕ ಔಷಧಿಗಳು ಸೇರಿದಂತೆ ಮೂರು ಟನ್ ಆಹಾರ ಪದಾರ್ಥವನ್ನ ಸಂಗ್ರಹಿಸಿ,  ಕೊಳ್ಳೆಗಾಲ ಪಟ್ಟಣದ ನಿರಾಶ್ರಿತ ಕೇಂದ್ರಕ್ಕೆ ನೀಡಲಾಗಿದೆ.  ಅತಿವೃಷ್ಟಿಯಿಂದ ನಮ್ಮ ಬಂಧುಗಳು ಕಷ್ಟ-ನಷ್ಟ ಅನುಭವಿಸುತ್ತಿದ್ದಾರೆ. ಅವರ ನೋವಿನ ಕಣ್ಣೀರು ಒರೆಸಲು ಮಾಡುತ್ತಿರುವ ಸಣ್ಣ ಪ್ರಯತ್ನವಿದು ಎನ್ನುತ್ತಾರೆ ಸ್ಥಳೀಯ ವರ್ತಕರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments