Webdunia - Bharat's app for daily news and videos

Install App

ಎಂಇಎಸ್ ಇರಬೇಕಾದದ್ದು ಮಹಾರಾಷ್ಟ್ರದಲ್ಲಿ ಕರ್ನಾಟಕದಲ್ಲಿ ಅಲ್ಲ: ಶೋಭಾ ಕರಂದ್ಲಾಜೆ

Webdunia
ಗುರುವಾರ, 23 ಡಿಸೆಂಬರ್ 2021 (21:36 IST)
ಬೆಳಗಾವಿಯಲ್ಲಿ ಉದ್ದೇಶಪೂರ್ವಕವಾಗಿ ಗಲಭೆಗಳನ್ನು ಮಾಡುತ್ತಿದ್ದಾರೆ. ಎಂಇಎಸ್ ಪುಂಡಾಟಿಕೆಯ ಜೊತೆ ಕಾಂಗ್ರೆಸ್ ಇರುವ ಗುಮಾನಿ ಕೂಡ ಕಾಡುತ್ತಿದೆ. ಎಂಇಎಸ್ ಇರಬೇಕಾದದ್ದು ಮಹಾರಾಷ್ಟ್ರದಲ್ಲಿ ಕರ್ನಾಟಕದಲ್ಲಿ ಅಲ್ಲ. ಸರ್ಕಾರಕ್ಕೆ ಕೆಟ್ಟ ಹೆಸರು ತಂದು, ಅಧಿವೇಶನವನ್ನು ವಿಫಲಗೊಳಿಸುವ ವ್ಯವಸ್ಥಿತಿ ಷಡ್ಯಂತ್ರ ನಡೆಯುತ್ತಿದೆ, ಇದರ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಎಂಇಎಸ್ ಹಾಗೂ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಚಿಕ್ಕಮಗಳೂರು ನಗರದಲ್ಲಿ ನಗರಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕನ್ನಡಿಗರು-ಮರಾಠಿಗರು ಎಂದು ಬೇಧ-ಭಾವವಿಲ್ಲ, ಅನುದಾನ ಹಾಗೂ ಯೋಜನೆಗಳನ್ನು ಇಬ್ಬರಿಗೂ ಸಮಾನವಾಗಿ ನೀಡಿದ್ದೇವೆ. ಎಲ್ಲಾ ಧರ್ಮದವರಿಗೂ ಕೊಟ್ಟಿದ್ದೇವೆ. ಹಿಂದೂ-ಮುಸ್ಲಿಂ-ಕ್ರೈಸ್ತ ಎಲ್ಲರಿಗೂ ಏಕಪ್ರಕಾರವಾಗಿ ನೀಡಿದ್ದೇವೆ ಎಂದರು.
ಬೆಳಗಾವಿ, ಬೀದರ್, ಬಿಜಾಪುರ, ಚಿಕ್ಕೋಡಿ ಭಾಗದವರಿಗೆ ಅನ್ಯಾಯ ಮಾಡಿಲ್ಲ. ಅವರನ್ನು ಒಂದೇ ತಾಯಿ ಮಕ್ಕಳಂತೆ ನೋಡಿದ್ದೇವೆ. ಅನಾವಶ್ಯಕವಾಗಿ, ರಾಜಕೀಯ ಪ್ರೇರಿತವಾಗಿ ನಡೆಯುತ್ತಿರುವ ಗಲಭೆಗಳ ಬಗ್ಗೆ ನಾವು ಎಚ್ಚರಗೊಳ್ಳಬೇಕು. ಕನ್ನಡಿಗರು-ಮರಾಠಿಗರು, ಜಾತಿ-ಧರ್ಮ ಎಂಬುದನ್ನು ನೋಡದೆ ಬಿಜೆಪಿ ಸರ್ಕಾರ ಏಖಮುಖವಾಗಿ ಯೋಜನೆ-ಅನುದಾನ ಕೊಡುತ್ತಿದ್ದೇವೆ. ಈಗಾಗಲೇ ಗಲಭೆಕೋರನ್ನು ಬಂಧಿಸಿ ಗೂಂಡಾ ಕಾಯ್ದೆ, ದೇಶದ್ರೋಹದ ಕಾಯ್ದೆಯಡಿ ಕ್ರಮಕೈಗೊಳ್ಳಲು ಸರ್ಕಾರ ಮುಂದಾಗಿದೆ. ಇಂದು ಕೂಡ ಕಲ್ಲು ಬಿಸಾಡಿದ್ದಾರೆ. ಬಸ್‍ಗಳು ನಿಂತಿದ್ದಾವೆ ಎಂಬ ವರದಿ ಇದೆ. ಬೆಳಗಾವಿಯ ಘಟನೆಗೆ ಮಹಾರಾಷ್ಟ್ರ ಸರ್ಕಾರವೇ ಇದಕ್ಕೆ ಕುಮ್ಮುಕ್ಕು ನೀಡುತ್ತಿದೆ ಎಂದು ಆರೋಪಿಸಿದ್ದಾರೆ.
ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಕೇವಲ ಮರಾಠಿಗರಿಗೆ ಮಾತ್ರ ಸಿಎಂ ಅಲ್ಲ, ಇಡೀ ರಾಜ್ಯಕ್ಕೆ ಸಿಎಂ ಅಕ್ಕಪಕ್ಕದ ರಾಜ್ಯದವರ ಜೊತೆ ಚೆನ್ನಾಗಿರಬೇಕು ಅದು ಅವರ ಜವಾಬ್ದಾರಿ ಜೊತೆಗೆ ಅವರು ಈ ಬಗ್ಗೆ ಕ್ಷಮೆ ಕೇಳುವಂತೆ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments