ಕೋಲಾರ ಜಿಲ್ಲೆಯ ಮೂಲದ ಮೀಟರ್ ಬಡ್ಡಿ ಮುನಿಕೃಷ್ಣ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 70 ಲಕ್ಷ ರೂಪಾಯಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಆಧಾರದ ಹಿನ್ನೆಲೆಯಲ್ಲಿ ಪೊಲೀಸರು, ಹೊಸಕೋಟೆ ಟೋಲ್ ಗೇಟ್ ಬಳಿ ಇನ್ನೋವಾ ಕಾರಿನಲ್ಲಿ ಬೆಂಗಳೂರಿಗೆ ಬರುತ್ತಿರುವಾಗ ತಡೆದು ಪರಿಶೀಲನೆ ನಡೆಸಿದಾಗ ನೋಟು ಎಣಿಸುವ ಯಂತ್ರ ಮತ್ತು 70 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಪೊಲೀಸರು ಮರಳು ದಂಧೆ, ಮೀಟರ್ ದಂಧೆ ನಡೆಸುತ್ತಿದ್ದ ಮೀಟರ್ ಬಡ್ಡಿ ಮುನಿಕೃಷ್ಣನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಆರೋಪಿಗಳಾದ ಮುನಿಕೃಷ್ಣ, ಕಾರು ಚಾಲಕ ಮಹೇಶ್, ಶಬರೀಶ್, ವೆಂಕಟೇಶ್, ನಾರಾಯಣ್ ಸ್ವಾಮಿ ಸೇರಿದಂತೆ ಒಟ್ಟು ಐವರು ಆರೋಪಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.