Webdunia - Bharat's app for daily news and videos

Install App

ವಿಧಾನ ಪರಿಷತ್ ಚುನಾವಣೆ: ಗೆಲುವಿನ ನಗೆ ಬೀರಿದ ಸುಜಾಕುಶಾಲಪ್ಪ

Webdunia
ಮಂಗಳವಾರ, 14 ಡಿಸೆಂಬರ್ 2021 (21:08 IST)
ಕೊಡಗು ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್’ಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿಯ ಸುಜಾ ಕುಶಾಲಪ್ಪ ಅವರು ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್’ನ ಮಂಥರ್ ಗೌಡ ಅವರನ್ನು 102 ಮತಗಳಿಂದ ಪರಾಭವಗೊಳಿಸಿ ಗೆಲುವಿನ ನಗೆ ಬೀರಿದ್ದಾರೆ.
ನಗರದ ಸಂತ ಜೋಸೆಫರ ಶಾಲೆ ಆವರಣದಲ್ಲಿ ನಡೆದ ಮೊದಲ ಸುತ್ತಿನ ಮತ ಎಣಿಕೆಯ ಸಂದರ್ಭ ಬಿಜೆಪಿಯ ಸುಜಾ ಕುಶಾಲಪ್ಪ ಅವರು 93 ಮತಗಳ ಮುನ್ನಡೆ ಸಾಧಿಸಿದ್ದರೆ, ಕೊನೆಯ ಸುತ್ತಿನಲ್ಲಿ 102 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಸುಜಾಕುಶಾಲಪ್ಪ ಅವರು 705 ಮತಗಳನ್ನು ಪಡೆದರೆ, ಮಂಥರ್ ಗೌಡ 603 ಮತಗಳನ್ನಷ್ಟೇ ಪಡೆಯಲು ಶಕ್ತರಾದರು.17ಮತಗಳು ಕುಲಗೆಟ್ಟಿದ್ದವು.
ಡಿ.10ರಂದು ನಡೆದ ಚುನಾವಣೆಯಲ್ಲಿ 638 ಪುರುಷ ಹಾಗೂ 687 ಮಹಿಳೆಯರು ಸೇರಿದಂತೆ 1325 ಮಂದಿ ಮತ ಚಲಾಯಿಸಿದ್ದರು.
ಎಣಿಕೆಗೂ ಮುನ್ನ ಎಲ್ಲಾ ಮತ ಪತ್ರಗಳನ್ನು ಮಿಶ್ರಣ ಮಾಡಿ ತಲಾ 20 ಮತಪತ್ರಗಳಂತೆ ಕಟ್ಟುಗಳನ್ನು ಮಾಡಲಾಯಿತು.
ಆರು ಟೇಬಲ್’ಗಳಲ್ಲಿ ಮತ ಎಣಿಕೆ ನಡೆಸಲಾಯಿತು.
ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತ್ತು.
ಜಿಲ್ಲೆಯ ಮೂಲೆಮೂಲೆಗಳಿಂದ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಆಗಮಿಸಿದ್ದರಾದರೂ,ಮತ ಎಣಿಕೆ ಸಂದರ್ಭ ಮಂಥರ್ ಗೌಡ ಅವರ ಹಿನ್ನಡೆ ಕಂಡು ಹಲವು ಕಾಂಗ್ರೆಸ್ ಕಾರ್ಯಕರ್ತರು ಜಾಗ ಖಾಲಿ ಮಾಡಿದ್ದರು. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಪಕ್ಷದ ವರಿಷ್ಠರು ಎಡವಿದ್ದೇ ಮಂಥರ್ ಗೌಡ ಸೋಲಿಗೆ ಕಾರಣ ಎಂಬ ಅಭಿಪ್ರಾಯ ಕಾರ್ಯಕರ್ತರದ ಕೇಳಿ ಬಂದಿತು.
ಮತ ಎಣಿಕೆ ಕೇಂದ್ರ ಹಾಗೂ ಸುತ್ತಲ‌ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments