ಮೆಟ್ರೋ ದರ ಏರಿಕೆ: ಬೈಕಿನ ಪ್ರಯಾಣ ಜೇಬಿಗೆ ಹಿತ ಎನ್ನುವಂತಾಗಿದೆ

Sampriya
ಭಾನುವಾರ, 9 ಫೆಬ್ರವರಿ 2025 (18:28 IST)
ಬೆಂಗಳೂರು: ಪೆಟ್ರೋಲ್, ಡೀಸೆಲ್, ಹಾಲು, ಬಸ್ಸು ದರ ಏರಿಕೆಯ ಬರೆಯಿಂದ ಈಗಾಗಲೇ ಹೈರಾಣಗಿರುವ ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ಬೆಂಗಳೂರು ಮೆಟ್ರೋ ದರವನ್ನ ಏಕಾಏಕಿ 50% ಏರಿಸುವ ಮೂಲಕ ಜನಸಾಮಾನ್ಯರ ಗಾಯದ ಮೇಲೆ ಮತ್ತೊಂದು ಬರೆ ಎಳೆದಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್‌ ಅಶೋಕ್‌ ಆಕ್ರೋಶ ಹೊರಹಾಕಿದ್ದಾರೆ..

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ಮೆಟ್ರೋ ದರ 50% ಏರಿಕೆ ಮಾಡಿರುವುದರಿಂದ   ಅನೇಕ ಜನಸಾಮಾನ್ಯರಿಗೆ ಈಗ ಮೆಟ್ರೋ ಸಂಚಾರ ಕೈಗೆಟುಕದ ಪರಿಸ್ಥಿತಿ ಎದುರಾಗಿದ್ದು. ಮೆಟ್ರೋ ಪ್ರಯಾಣಕ್ಕಿಂತ ಸ್ವಂತ ಸ್ಕೂಟರ್, ಬೈಕಿನ ಪ್ರಯಾಣ ಜೇಬಿಗೆ ಹಿತ ಎನ್ನುವಂತಾಗಿದೆ.


ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸಿ, ಬೆಂಗಳೂರಿನ ಟ್ರಾಫಿಕ್ ಸಮಸ್ಯೆ, ಪರಿಸರ ಮಾಲಿನ್ಯಕ್ಕೆ ಪರಿಹಾರ ಕಂಡುಕೊಳ್ಳಬೇಕಾದ ಸರ್ಕಾರ, ಜನರನ್ನು ಮೆಟ್ರೋದಿಂದ ವಿಮುಖರಾಗುವಂತೆ ಮಾಡುತ್ತಿದೆ.

ಈ ಕೊಡಲೇ ಮೆಟ್ರೋ ದರ ಏರಿಕೆಯ ನಿರ್ಧಾರವನ್ನ ಹಿಂಪಡೆಯಬೇಕು ಎಂದು ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸುತ್ತೇನೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ಮುಂದಿನ ಸುದ್ದಿ
Show comments