ಮೆಟ್ರೋ ರೈಲು ಸಂಚಾರದಲ್ಲಿ ಕೊಂಚ ಬದಲಾವಣೆ

Webdunia
ಶುಕ್ರವಾರ, 24 ಜೂನ್ 2022 (20:38 IST)
ಬೆಂಗಳೂರು ಮೆಟ್ರೋ ರೈಲು ನಿಗಮವು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ವರೆಗೆ  ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿದ್ದು  ನಾಳೆ ರಾತ್ರಿ 09.30 ರಿಂದ ಸಂಚಾರವನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ನೇರಳೆ ಮಾರ್ಗದ ಕೊನೆಯ ಮೆಟ್ರೋ ರೈಲು ಸೇವೆಯು ಕೆಂಗೇರಿ ಮಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ, ಕಡೆಗೆ ರಾತ್ರಿ 8.40 ಗಂಟೆಗೆ ಹೊರಡಲಿದೆ ಮತ್ತು ಬೈಯಪ್ಪನಹಳ್ಳಿಯಿಂದ ಕೆಂಗೇರಿ  ಕಡಗೆ ಕೊನೆಯ ಮೆಟ್ರೋ ರೈಲು ಸೇವೆ ರಾತ್ರಿ 09.30 ಗಂಟೆಗೆ ಲಭ್ಯವಿರುತ್ತದೆ. ಮೆಜೆಸ್ಟಿಕ್ ನಿಂದ ಬೈಯಪ್ಪನಹಳ್ಳಿ ನಿಲ್ದಾಣಕ್ಕೆ ಹೋಗುವ ಕೊನೆಯ ರೈಲು ಸೇವ ರಾತ್ರಿ 9.10 ಗಂಟೆಯವರೆಗೆ ಲಭ್ಯವಿರುತ್ತದೆ. ಎಂ.ಜಿ. ರಸ್ತೆ ಮತ್ತು ಕೆಂಗೇರಿ ಮಟ್ರೋ ನಿಲ್ದಾಣಗಳ ನಡುವೆ ರಾತ್ರಿ 9.30 ಗಂಟೆಯಿಂದ ರಾತ್ರಿ 11.00 ಗಂಟೆಯವರೆಗೆ ವೇಳಾಪಟ್ಟಿಯ ಪ್ರಕಾರ ಲಭ್ಯವಿರುತ್ತದೆ. ಇನ್ನೂ ಹಸಿರು ಮಾರ್ಗದ ಮೆಟ್ರೋ ರೈಲು ಸೇವೆಯಲ್ಲಿ, ಯಾವುದೇ ವ್ಯತ್ಯಾಸವಿರುವುದಿಲ್ಲ ಮತ್ತು ವೇಳಾಪಟ್ಟಿಯ ಪ್ರಕಾರ ಸೇವೆ ಲಭ್ಯವಿರುತ್ತದೆ. ಭಾನುವಾರದಂದು ಮೆಟ್ರೋ ರೈಲು ಸೇವೆಯು ನೇರಳೆ ಮಾರ್ಗದಲ್ಲಿ ಪೂರ್ಣವಾಗಿ ಬೆಳಿಗೆ, 7.00 ಗಂಟೆಯಿಂದ ವೇಳಾಪಟ್ಟಿಯ ಪ್ರಕಾರ ಪುನರಾರಂಭವಾಗಲಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments