2024ಕ್ಕೆ ಮೆಟ್ರೋ ಎರಡನೇ ಹಂತ ಪೂರ್ಣಗೊಳಿಸಲು ಸೂಚನೆ: ಸಿಎಂ ಬೊಮ್ಮಾಯಿ

Webdunia
ಭಾನುವಾರ, 29 ಆಗಸ್ಟ್ 2021 (14:07 IST)
ಮೆಟ್ರೋ ಎರಡನೇ ಹಂತದ ಕಾಮಗಾರಿ 2025ಕ್ಕೆ ಪೂರ್ಣಗೊಳ್ಳುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಆದರೆ 2024ರೊಳಗೆ ಕಷ್ಟ ಆದರೂ ಸರಿ ಪೂರ್ಣಗೊಳಿಸಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮೈಸೂರು ರಸ್ತೆಯಿಂದ ಕೆಂಗೇರಿ ವರೆಗೂ ವಿಸ್ತರಣೆಗೊಂಡ 7.5 ಕಿ.ಮೀ. ದೂರದ ಸಂಚಾರವನ್ನು ಉದ್ಭಾಟಿಸಿದ ನಂತರ ಅವರು ಮಾತನಾಡಿದರು.
ಇಂದು ಉದ್ಘಾಟನೆ ಮಾಡಿರುವ ಮೆಟ್ರೋ ಮಾರ್ಗ ಪ್ರಮುಖ ಭಾಗವಾಗಿದ್ದು, ಎಲ್ಲಿ ಜಾಗ ಸಿಗಲಿದೆ ಅಲ್ಲಿ ಮೆಟ್ರೋ ಮಾಡಬೇಕು. ಈ ಏಳುವರೆ ಕಿ.ಮೀ ಭಾಗದಲ್ಲಿ ಅತಿ ಹೆಚ್ಚು ಜನಸಂದಣಿ ಇದೆ. ಈ ಭಾಗದಲ್ಲಿ ಮೆಟ್ರೋ ಮಾಡಿದ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನ ಎಂದರು.
ಮೆಟ್ರೋ ಕೇವಲ ಬೆಂಗಳೂರಿನ ನಾಡಿ ಅಲ್ಲ, ಭವಿಷ್ಯದ ಜೀವನಾಡಿ. ಮೆಟ್ರೋ ಯೋಜನೆ ಬೆಂಗಳೂರಿಗೆ ಬಹು ಮುಖ್ಯ. ಮೆಟ್ರೋ ಇರುವುದರಿಂದ ಐಟಿ ಜನರು ಇಲ್ಲಿಗೆ ಬರುತ್ತಿದ್ದಾರೆ. ಮೂರು ಕಮ್ಯುನಿಕೇಷನ್ ಮಾರ್ಗ ಮಾಡ್ತಿದ್ದೇವೆ. ವಿಮಾನ ನಿಲ್ದಾಣಕ್ಕೆ ಮಾರ್ಗ ಮಾಡ್ತಿದ್ದೇವೆ. ಎಲ್ಲೂ ಕೂಡ ಈ ಯೋಜನೆ ಇಲ್ಲ. ಅದನ್ನ ನಾವು ಮಾಡ್ತಿದ್ದೇವೆ ಎಂದು ಸರ್ಮಥಿಸಿಕೊಂಡರು.
ನಮ್ಮಲ್ಲಿ ದುಡಿಯುವ ವರ್ಗ ಇದೆ. ಅವುಗಳನ್ನ ಗಮನದಲ್ಲಿಟ್ಟುಕೊಂಡಿದ್ದೇವೆ. 75 ಕೊಳಗೇರಿಗಳಲ್ಲಿ ಮೂಲಭೂತ ಸೌಕರ್ಯಗಳಾಗಿ ಮಾಡುತ್ತೇವೆ. ಸಂಚಾರಿ ದಟ್ಟಣೆ ಇರುವ ಎಲ್ಲಾ ಮಾರ್ಗಗಳಿಗೆ ಯಾವುದೇ ಅಡೆತಡೆ ಇಲ್ಲದೆ ಮುಕ್ತ ಸಂಚಾರ ಮಾಡುತ್ತೇವೆ. ಜನ ವಸತಿ ಪ್ರದೇಶ, ಬಿಬಿಎಂಪಿ, 110 ಹಳ್ಳಿಗಳಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಬೊಮ್ಮಾಯಿ ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments