Webdunia - Bharat's app for daily news and videos

Install App

ಮುಖ್ಯ ಕಾರಣದಿಂದ ಮೆಟ್ರೋ ಕಾಮಗಾರಿ ಸ್ಥಗಿತ

Webdunia
ಸೋಮವಾರ, 30 ಜನವರಿ 2023 (15:22 IST)
ಎಲ್ಲೆಲ್ಲಿ ಮೆಟ್ರೋ ಮಾರ್ಗ ನಿರ್ಮಾಣ ಕಾಮಗಾರಿ ನಡೆಯುತ್ತಿದೆ .ಅಲ್ಲಿ ಪರಿಣಾಮಕಾರಿ ಹಾಗೂ ಸುರಕ್ಷತಾ ವಿಧಾನ ಅನುಷ್ಠಾನಗೊಳಿಸಲು BMRCL ಚಿಂತನೆ ನಡೆಸಿದೆ.ಆದ್ರೆ ಮುಖ್ಯ ಕಾರಣದಿಂದಾಗಿ ಮೆಟ್ರೋ ಕಾಮಗಾರಿಗಳು ಸದ್ಯಕ್ಕೆ ಸ್ಥಗಿತಗೊಂಡಿವೆ.ಕಳೆದ ಜನವರಿ 10ರಂದು ಹೆಣ್ಣೂರು ರಸ್ತೆಯಲ್ಲಿ ಮೆಟ್ರೋ ಕಾಮಗಾರಿಯಲ್ಲಿ ಕಾಂಕ್ರೀಟ್ ಹಾಕಲು ನಿಲ್ಲಿಸಲಾಗಿದ್ದ ಕಬ್ಬಿಣದ ಸರಳುಗಳ ಪಿಲ್ಲರ್ ರಸ್ತೆ ಕುಸಿದು ಅವಘಡ ಸಂಭವಿಸಿದೆ.ಘಟನೆಯಲ್ಲಿ ತಾಯಿ ತೇಜಸ್ವಿನಿ ಹಾಗೂ ಅವರ ಎರಡೂವರೆ ವರ್ಷದ ಮಗು ವಿಹಾನ್ ಪ್ರಾಣ ಬಿಟ್ಟಿದ್ದರು.ಇದರ ಹಿಂದೆಯೇ ನಮ್ಮ ಮೆಟ್ರೋ  ಕಾಮಗಾರಿ, ಗುಣಮಟ್ಟ ಬಗ್ಗೆ ಸಾರ್ವಜನಿಕವಾಗಿ ಆತಂಕ ಹೆಚ್ಚಾಯಿತು.ಘಟನೆ ಬೆನ್ನಲ್ಲೆ ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿಮಿಟೆಡ್  ಎಚ್ಚೆತ್ತುಕೊಂಡಿದೆ. ಕಾಮಗಾರಿಗಳ ಪ್ರತಿ ಹಂತಕ್ಕೂ ಪ್ರಾಮಾಣಿಕೃತ ಕಾರ್ಯಾಚರಣೆ (SOP)ವಿಧಾನ ಅಂತಿಮಗೊಳಿಸಿದ ಬಳಿಕವೇ ಕಾಮಗಾರಿಗಳ ಪುನಾರಂಭಕ್ಕೆ ನಿರ್ಧಾರ‌ ಮಾಡಿದೆ.ನಾಗವಾರದಿಂದ ಹೆಬ್ಬಾಳವರೆಗಿನ ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಪಿಲ್ಲರ್ ನಿರ್ಮಾಣಕ್ಕೆಂದು ಸ್ಟೀಲ್, ಕಬ್ಬಿಣದ ಸರಳುಗಳು/ಚೌಕಟ್ಟುಗಳನ್ನು ನಿಲ್ಲಿಸಲಾಗಿತ್ತು. ಘಟನೆ ಬಳಿಕ ಅವು ಹಾಗೇಯೇ ನಿಂತಿವೆ. ಇಲ್ಲಿ ಕಾಮಗಾರಿ ನಡೆಯುತ್ತಿಲ್ಲ. ಇನ್ನೂ ಕಲ್ಯಾಣ ನಗರದಿಂದ ಎಚ್‌ಬಿಆರ್‌ ಲೇಔಟ್‌ ಮಧ್ಯದಲ್ಲಿನ ಸುಮಾರು 10ಕ್ಕೂ ಕಂಬಗಳು ಸಿದ್ಧವಾಗಿವೆ.ಎಚ್‌ಬಿಆರ್‌ ಲೇಔಟ್‌ನಿಂದ ಹೊರಮಾವುವರೆಗೆ 23 ಹಾಗೂ ಹೊರಮಾವಿನಿಂದ ಕಸ್ತೂರಿ ನಗರದವರೆಗೆ ಪಿಲ್ಲರ್ ನಿರ್ಮಾಣಕ್ಕಾಗಿ 12 ಕಡೆಗಳಲ್ಲಿ ಕಬ್ಬಿಣದ ಸರಳು ಹಾಕಿ ಬಿಡಲಾಗಿದೆ.ಸದ್ಯ ನಗರದಲ್ಲಿ ನಡೆಯುತ್ತಿರುವ ನಮ್ಮ ಮೆಟ್ರೋ ಕಾಮಗಾರಿಗಳ ಪ್ರತಿ ಹಂತಕ್ಕೂ ಪ್ರತ್ಯೇಕವಾಗಿ ಎಸ್‌ಒಪಿ ರೂಪುಗೊಳ್ಳಲಿದೆ. ಪ್ರತಿ ಪಿಲ್ಲರ್ ಗುಣಮಟ್ಟ, ಎತ್ತರ ಎಷ್ಟಿರಬೇಕು, ಕಂಬಗಳ ಬಲವರ್ಧನೆ, ಮೆಟ್ರೋ ಮಾರ್ಗ ಕಾಮಗಾರಿಯ ಪ್ರತಿ ಹಂತದಲ್ಲಿ ಸುರಕ್ಷತೆ ಕಾಪಡಲಾಗುವುದು. ಎಸ್‌ಒಪಿ ವ್ಯಾಪ್ತಿಗೆ ಬಿಎಂಆರ್‌ಸಿಎಲ್‌ ತಂದು ಅಂತಿಮವಾದ ಬಳಿಕವೇ ಕಾಮಗಾರಿಗಳು ಮರು ಆರಂಭಗೊಳ್ಳಲಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments