ಮೈಕ್ರೋ ಫೈನಾನ್ಸ್ ಕಿರುಕುಳದ ಬಗ್ಗೆ ಸಿಎಂ ಸಿದ್ದರಾಮಯ್ಯ ಸಭೆ ಮಾಡಿದ್ದರೂ ಡೋಂಟ್ ಕೇರ್

Krishnaveni K
ಸೋಮವಾರ, 27 ಜನವರಿ 2025 (11:03 IST)
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ನೀಡುತ್ತಿರುವ ಬಗ್ಗೆ ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಸಭೆ ಕರೆದು ಅವರಿಗೆ ಖಡಕ್ ಎಚ್ಚರಿಕೆ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದೀಗ ಮತ್ತೊಬ್ಬ ಮಹಿಳೆ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
 

ಮೈಕ್ರೋ ಫೈನಾನ್ಸ್ ನಲ್ಲಿ ಸಾಲ ವಸೂಲಾತಿ ಕಿರುಕುಳದಿಂದ ಈಗಾಗಲೇ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಮೊನ್ನೆ ಸಿಎಂ ಸಿದ್ದರಾಮಯ್ಯ ಮೈಕ್ರೋ ಫೈನಾನ್ಸ್ ಮಾಲಿಕರ ಸಭೆ ಕರೆದು ಕೆಲವೊಂದು ಗೈಡ್ ಲೈನ್ಸ್ ನೀಡಿದ್ದರು.

ಸಾಲ ವಸೂಲಾತಿಗೆ ಕೆಲವೊಂದು ನಿಯಮಗಳನ್ನು ಅನುಸರಿಸಬೇಕು. ಬೇಕಾಬಿಟ್ಟಿ ಬೆದರಿಕೆ ಹಾಕಿ, ಸಮಯವಲ್ಲದ ಸಮಯದಲ್ಲಿ ಹೋಗಿ ಸಾಲ ಕೇಳುವಂತಿಲ್ಲ. ನಿಯಮ ಮೀರಿ ನಡೆದುಕೊಂಡರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಆದರೆ ಸಿಎಂ ಎಚ್ಚರಿಕೆಯೂ ಯಾಕೋ ಫಲಗೂಡುವ ಲಕ್ಷಣ ಕಾಣುತ್ತಿಲ್ಲ.

ನಂಜನಗೂಡಿನಲ್ಲಿ 53 ವರ್ಷದ ಜಯಶೀಲಾ ಎಂಬವರು ಮೈಕ್ರೋ ಫೈನಾನ್ಸ್ ಹಾವಳಿಗೆ ಬೆದರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಈಕೆ ಹಸು ಸಾಕಣಿಕೆಗಾಗಿ 5 ಲಕ್ಷ ರೂ. ಸಾಲ ಪಡೆದುಕೊಂಡಿದ್ದಳು. ಇದಕ್ಕೆ ಪ್ರತೀ ತಿಂಗಳು 20000 ರೂ. ಇಎಂಐ ಕಟ್ಟಬೇಕಾಗಿತ್ತು. ಆದರೆ ಇತ್ತೀಚೆಗೆ ಹಸು ಮೃತಪಟ್ಟಿತ್ತು. ಇದರಿಂದಾಗಿ ಸಾಲ ತೀರಿಸುವುದು ಕಷ್ಟವಾಗಿತ್ತು. ಈ ಹಿನ್ನಲೆಯಲ್ಲಿ ಮಹಿಳೆ ವಿಷ ಸೇವಿಸಿ ತಮ್ಮ ಜಮೀನಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದೀಗ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೆಹಲಿಗೆ ಹೋಗುತ್ತಿದ್ದ ಸಿದ್ದರಾಮಯ್ಯ ಭಾರೀ ಅನಾಹುತದಿಂದ ಪಾರು

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ಮುಂದಿನ ಸುದ್ದಿ
Show comments