Webdunia - Bharat's app for daily news and videos

Install App

ಮಧ್ಯ ವಯಸ್ಕರು, ಅವಿವಾಹಿತರು ಹಾಗು ವಿಧುರರು ವ್ಯಕ್ತಿಗಳನ್ನೇ ಟಾರ್ಗೆಟ್

Webdunia
ಗುರುವಾರ, 4 ನವೆಂಬರ್ 2021 (21:49 IST)
ಬೆಂಗಳೂರು: ಮಧ್ಯ ವಯಸ್ಕರು, ಅವಿವಾಹಿತರು ಹಾಗು ವಿಧುರರು ವ್ಯಕ್ತಿಗಳನ್ನೇ ಟಾರ್ಗೆಟ್ ಮಾಡಿ ಹನಿಟ್ರ್ಯಾಪ್ ಮಾಡುತ್ತಿದ್ದ ತಂಡದ ಕಿಂಗ್ ಪಿನ್ ಒಬ್ಬನನ್ನು ಗೋವಿಂದಪುರ ಪೊಲೀಸರು ಬಂಧಿಸಿದ್ದಾರೆ.
ಮೊಹಮ್ಮದ್ ಬಂಧಿತ ಆರೋಪಿ.
ಆರೋಪಿಗಳು ಮೊದಲಿಗೆ ಮಿಸ್ಡ್ ಕಾಲ್ ಕೊಟ್ಟು ನಂತರ ವಾಟ್ಸ್ ಆ್ಯಪ್​​​ನಲ್ಲಿ ಮೆಸೇಜ್​​ ಮಾಡುತ್ತಿದ್ದರು. ವಾಟ್ಸ್​ ಆಪ್ ನಲ್ಲಿ ಪ್ರತಿಕ್ರಿಯಿಸಿದರೆ ಬಳಿಕ ಮತ್ತೆ ಕರೆ ಮಾಡಿ ಖೆಡ್ಡಾಕ್ಕೆ ಬೀಳಿಸಿಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ.
ಮಾರತ್ತಹಳ್ಳಿ ನಿವಾಸಿಯಾಗಿರುವ 50 ವರ್ಷ ವಯಸ್ಸಿನ ವ್ಯಕ್ತಿಗೆ ವಾಟ್ಸ್​​​ ಆ್ಯಪ್​ನಲ್ಲಿ ಯುವತಿಯ ಹೆಸರಿನಲ್ಲಿ ಮೆಸೇಜ್ ಮಾಡುತ್ತಿದ್ದರು. ನಗರದಲ್ಲೇ ಕುಳಿತು ತಾವು ಉತ್ತರ ಭಾರತ ಮೂಲದವರು ಎಂದು ಹೇಳಿ ಬೆಂಗಳೂರಿಗೆ ಬಂದಾಗ ಭೇಟಿಯಾಗುವುದಾಗಿ ಸ್ನೇಹ ಬೆಳೆಸುತ್ತಿದ್ದರು. ಕಳೆದ ಅ.10 ರಂದು ವ್ಯಕ್ತಿಗೆ ನಗರಕ್ಕೆ ಬಂದಿರುವುದಾಗಿ ಆರೋಪಿಗಳು ತಿಳಿಸಿದ್ದರು. ಯುವತಿಯೊಬ್ಬಳಿಂದ ಕರೆ ಮಾಡಿಸಿ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಹಾಗಾಗಿ ದೂರುದಾರ ವ್ಯಕ್ತಿ ಯುವತಿಯನ್ನು ಭೇಟಿ ಮಾಡಲು ರಾತ್ರಿಯ ವೇಳೆ ನಗರದ ವೀರಣ್ಣಪಾಳ್ಯದ ಹೋಟೆಲ್ ಬಳಿ ಬಂದಿದ್ದರು.
ನಂತರ ಹೋಟೆಲ್ ಒಳಗೆ ತೆರಳುತ್ತಿದ್ದಂತೆ ಯುವತಿ ಸಲುಗೆಯಿಂದ ಮಾತನಾಡಲು ಆರಂಭಿಸಿದ್ದಳು. ಈ ವೇಳೆ ಹೋಟೆಲ್ ರೂಂಗೆ ಪೊಲೀಸರ ಹೆಸರಿನಲ್ಲಿ ಎಂಟ್ರಿ ಕೊಟ್ಟ ಆರೋಪಿಗಳು ನೀನು ಡ್ರಗ್ಸ್​​ ಮಾರುತ್ತಿದ್ದೀಯಾ ಎಂಬ ಮಾಹಿತಿ ಇದೆ ಎಂದು ಅವಾಜ್ ಹಾಕಿದ್ದಾರೆ. ಬಳಿಕ ವ್ಯಕ್ತಿಯ ಮೊಬೈಲ್ ಕಸಿದುಕೊಂಡು ಫೋನ್​​ ಪೇ, ಗೂಗಲ್ ಪೇನಲ್ಲಿ ಆತ ಅಟ್ಯಾಚ್ ಮಾಡಿದ್ದ ಅಕೌಂಟ್ ಗಳನ್ನು ಚೆಕ್ ಮಾಡಿ ವ್ಯಕ್ತಿಯ 3 ಅಕೌಂಟ್​​​ಗಳಿಂದ 5 ಲಕ್ಷದ 91 ಸಾವಿರ ರೂ. ವರ್ಗಾಯಿಸಿಕೊಂಡಿದ್ದರು. ನಂತರ ಹೋಟೆಲ್ ರೂಂನಲ್ಲಿ ಕೂಡಿ ಹಾಕಿ ಪರಾರಿ ಆಗಿದ್ದರು.
ಓರ್ವ ಯುವತಿ ಸೇರಿ ಮೂವರು ಆರೋಪಿಗಳಿಂದ ಕೃತ್ಯ ನಡೆದಿದೆ ಎಂದು ಮಾರತ್ತಹಳ್ಳಿಯ ಪ್ರತಿಷ್ಠಿತ ಬ್ಯಾಂಕ್​​ನಲ್ಲಿ ಉದ್ಯೋಗಿಯಾಗಿರುವ ವ್ಯಕ್ತಿ ಗೋವಿಂದಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು.
 
20ಕ್ಕೂ ಹೆಚ್ಚು ಜನರಿಗೆ ಹನಿಟ್ರ್ಯಾಪ್:
ಓರ್ವ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿರುವ ಪೊಲೀಸರು ಬೆಂಗಳೂರು ನಗರವೊಂದರಲ್ಲೇ ಸುಮಾರು 20ಕ್ಕೂ ಹೆಚ್ಚು ಜನರಿಗೆ ಈ ರೀತಿಯಲ್ಲೇ ಹನಿಟ್ರ್ಯಾಪ್ ಮಾಡಿರುವುದನ್ನು ಪತ್ತೆ ಮಾಡಿದ್ದಾರೆ. ಸದ್ಯ ಪರಾರಿಯಾಗಿರುವ ಓರ್ವ ಯುವತಿ ಹಾಗು ಇನ್ನಿಬ್ಬರು ಆರೋಪಿಗಳ ಪತ್ತೆಗಾಗಿ ಗೋವಿಂದಪುರ ಪೊಲೀಸ್ ಠಾಣೆಯ ಸಿಬ್ಬಂದಿ ಬಲೆ ಬೀಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments