Webdunia - Bharat's app for daily news and videos

Install App

ಮಹಿಳಾ ದಿನಾಚರಣೆ ಅಮೃತದಾರೆ ಎದೆಹಾಲು ಬ್ಯಾಂಕ್

Webdunia
ಮಂಗಳವಾರ, 8 ಮಾರ್ಚ್ 2022 (14:59 IST)
ಕೆಲವು ಮಕ್ಕಳು ಹುಟ್ಟುವಾಗಲೇ ತಾಯಿ ಕಳೆದುಕೊಂಡೋ ಅಥವಾ ನಾನಾ ಕಾರಣಕ್ಕೆ ಶಿಶುಗಳಿಗೆ ಎದೆ ಹಾಲಿನ ಕೊರತೆ ಆಗುತ್ತೆ. ಇದನ್ನು ತಪ್ಪಿಸಲು ಎದೆಹಾಲು ಬ್ಯಾಂಕ್ ಆರಂಭಿಸಲಾಗಿದೆ. ರಾಜ್ಯದ ಮೈಸೂರು, ಬೆಂಗಳೂರು, ಬೆಳಗಾವಿ ಸೇರಿದಂತೆ ನಾಲ್ಕು ಕಡೆ ಎದೆಹಾಲು ಬ್ಯಾಂಕ್ ಕಾರ್ಯ ರೂಪಕ್ಕೆ ಬರಲಿದೆ ಎಂದು ಸಚಿವ ಡಾ.ಸುಧಾಕರ್ ತಿಳಿಸಿದರು.
ಹುಟ್ಟಿದ ಮಗುವಿಗೆ ತಾಯಿಯ ಎದೆಹಾಲು ಅಮೃತಕ್ಕೆ ಸಮ.. ಇಂತಹ ಅಮೃತಪಾನವನ್ನು ಸರಿಯಾದ ಸಮಯದಲ್ಲಿ ಪಡೆಯಲು ಆಗದೇ ಅದೆಷ್ಟು ನವಜಾತ ಶಿಶುಗಳು ಮರಣ ಹೊಂದಿರುವುದನ್ನ ನೋಡಿದ್ದೇವೆ. ಹೀಗಾಗಿ ಶಿಶುಗಳಿಗೆ ಅಮೃತವಾಗಿರುವ ಎದೆಹಾಲಿನ‌ ಬ್ಯಾಂಕ್​ಗೆ ವಿಶ್ವ ಮಹಿಳಾ ದಿನದಂದೇ ಚಾಲನೆ ನೀಡಲಾಯಿತು.
 
ಮಂಗಳವಾರ ನಗರದ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿರುವ ಬಿಎಂಸಿಆರ್ ಐನಲ್ಲಿ ಅಮೃತಧಾರೆ ಎದೆಹಾಲು ಬ್ಯಾಂಕ್ ಹಾಗೂ ಗರ್ಭಿಣಿಯರ ತುರ್ತು ಚಿಕಿತ್ಸಾ ವಾರ್ಡ್​​ ಅನ್ನು ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ ಉದ್ಘಾಟಿಸಿದರು. ಈ ವೇಳೆ ಮಾತಾನಾಡಿದ ಸಚಿವರು, ಮಕ್ಕಳಿಗೆ ತಾಯಿ ಎದೆಹಾಲು ಅಮೃತದಂತೆ. ಹೀಗಾಗಿ ಇದರಿಂದ ಯಾವ ಮಕ್ಕಳು ವಂಚಿತರಾಗಬಾರದು. ಕೆಲವು ಮಕ್ಕಳು ಹುಟ್ಟುವಾಗಲೇ ತಾಯಿಯನ್ನು ಕಳೆದುಕೊಂಡೋ ಅಥವಾ ನಾನಾ ಕಾರಣಕ್ಕೆ ಶಿಶುಗಳಿಗೆ ಎದೆ ಹಾಲಿನ ಕೊರತೆ ಆಗುತ್ತೆ. ಇದನ್ನು ತಪ್ಪಿಸಲು ಎದೆಹಾಲು ಬ್ಯಾಂಕ್ ಆರಂಭಿಸಲಾಗಿದೆ. ರಾಜ್ಯದ ಮೈಸೂರು, ಬೆಂಗಳೂರು, ಬೆಳಗಾವಿ ಸೇರಿದಂತೆ ನಾಲ್ಕು ಕಡೆ ಎದೆಹಾಲು ಬ್ಯಾಂಕ್ ಕಾರ್ಯ ರೂಪಕ್ಕೆ ಬರಲಿದೆ ಎಂದು ತಿಳಿಸಿದರು.
 
ತಾಯಿಯ ಎದೆಹಾಲಿನಲ್ಲಿ ಪ್ರೊಟೀನ್, ಲವಣಾಂಶ, ಶರ್ಕರಪಿಷ್ಠ, ಫ್ಯಾಟ್ ಮೊದಲಾದ ಪ್ರತಿರೋಧಕ ಹೆಚ್ಚಿಸುವ ಜೀವಕಣಗಳಿದೆ. ಮೊದಲಿಗೆ ಈ ಉಪಕರಣವನ್ನು ಬಳಸಿ ಎದೆಹಾಲು ಡೊನೇಟ್ ಮಾಡುವ ತಾಯಿಯಿಂದ ಎದೆಹಾಲನ್ನು ಪಂಪ್ ಮಾಡಿ ಪ್ಯಾಶ್ಚುರೈಸೇಶನ್ ಪ್ರಕ್ರಿಯೆ ಬಳಿಕ ಅದನ್ನು ಶೀತಲಿಕರಣಗೊಳಿಸಿ ಸಂಗ್ರಹಿಸಲಾಗುತ್ತದೆ. ಈ ಎದೆಹಾಲು ಆರು ತಿಂಗಳವರೆಗೆ ರಕ್ಷಿಸಿಡುವ ವ್ಯವಸ್ಥೆ ಇಲ್ಲಿ ಮಾಡಲಾಗಿದೆ. ಈ ನಿಟ್ಟಿನಲ್ಲಿ ತಾಯಂದಿರು ಎದೆಹಾಲು ದಾನ ಮಾಡುವ ಬಗ್ಗೆ ಒಲವು ತೋರಬೇಕಾಗಿದೆ. ತಾಯಂದಿರು ದಾನ ಮಾಡುವ ಎದೆಹಾಲು ಮಕ್ಕಳ ಜೀವವುಳಿಸಲು ನೆರವಾಗಲಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೈಲಟ್ ಮಾಡಿದ ಡ್ರಾಮಾಕ್ಕೆ ವಿಮಾನ ಹಾರದೆ 1 ಗಂಟೆ ಕಾದು ಸುಸ್ತಾದ ಡಿಸಿಎಂ ಏಕನಾಥ ಶಿಂದೆ

ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ: ಶೋಭಾ ಕರಂದ್ಲಾಜೆ

Chinnaswamy Stampede: ಗೋವಿಂದರಾಜ್‌ಗೆ ಗೇಟ್‌ಪಾಸ್‌: ಸರ್ಕಾರಕ್ಕೆ ಜ್ಞಾನೋದಯವಾಯ್ತು ಎಂದ ಎಚ್‌ಡಿಕೆ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ
Show comments