Webdunia - Bharat's app for daily news and videos

Install App

ಹಾಲು ದುಬಾರಿ.. ಕಾಫೀ ಟಿ ಕೂಡ ದುಬಾರಿ

Webdunia
ಮಂಗಳವಾರ, 1 ಆಗಸ್ಟ್ 2023 (19:00 IST)
ರಾಜ್ಯದ ಜನರಿಗೆ ತಿಂಗಳ ಆರಂಭದಲ್ಲೇ ಶಾಕ್ ಮೇಲೆ ಶಾಕ್ ಸಿಗುತ್ತಿದೆ. ಒಂದು ಕಡೆ ತರಕಾರಿ ಆಯ್ತು. ಇದೀಗ ಹಾಲು ದುಬಾರಿ. ಇನ್ನು ಇಷ್ಟಕ್ಕೆ ಫುಲ್ ಸ್ಟಾಪ್ ಹಾಕದೇ ಹೋಟೆಲ್ ನಲ್ಲಿನ ಪ್ರೈಸ್ ಕೂಡ ಜಾಸ್ತಿ. ಅಬ್ಬಾ ಇಷ್ಟೆಲ್ಲಾ ದುಬಾರಿ ದುನಿಯಾದಲ್ಲಿ ಹೆಂಗಪ್ಪ ಜೀವನ ಅಂತಾ ಜನ ಫುಲ್ ಶಾಕ್ ಆಗ್ಬಿಟ್ಟಿದ್ದಾರೆ.ಒಂದು ಕಡೆ ಹಾಲಿನ ದರ ಏರಿಕೆಯ ಬಿಸಿ.. ಇನ್ನೊಂದು ಕಡೆ ಹೋಟೆಲ್ ತಿನಿಸುಗಳು ಕೂಡ ದುಬಾರಿ. ಹೌದು ನಂದಿನಿ ಹಾಲಿನ ದರ ಏರಿಕೆ ಇಂದಿನಿಂದ ಅಂದರೆ ಜಾರಿಗೆ ಬಂದಿದೆ. ಹಾಲು ಉತ್ಪಾದಕರ ಬೇಡಿಕೆ ಹಿನ್ನೆಲೆಯಲ್ಲಿ ನಂದಿನಿ ಹಾಲಿನ ಬೆಲೆ ಹೆಚ್ಚಳಕ್ಕೆ ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಜನತೆಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಿದೆ. ಹೈನುಗಾರರಿಗೆ ಈ ದರ ಏರಿಕೆ ಒಂದಿಷ್ಟು ನಿಟ್ಟುಸಿರು ಬಿಡುವಂತೆ ಮಾಡಿದರೇ, ಇತ್ತ ಸಾಮಾನ್ಯ ಜನರ ಜೇಬಿಗೆ ಕತ್ತರಿ ಬಿದ್ದಂತಾಗಿದೆ. 

ಇನ್ನು ಹಾಲು, ದಿನಸಿ ಸೇರಿದಂತೆ ಇತರೆ ಬೆಲೆಗಳ ಏರಿಕೆ ಹಿನ್ನೆಲೆಯಲ್ಲಿ ಹೋಟೆಲ್‌ಗಳಲ್ಲಿ ಎಲ್ಲಾ ತಿಂಡಿ, ತಿನಿಸುಗಳ ದರವನ್ನು ಶೇ. 10ರಷ್ಟು ಹೆಚ್ಚಳ ಮಾಡಿದೆ. ಕಾಫಿ, ಟೀ, ಉಪಾಹಾರ, ಊಟ, ಚಾಟ್ಸ್‌ ಸೇರಿದಂತೆ ಎಲ್ಲ ಆಹಾರ ಪದಾರ್ಥಗಳ ದರ ಶೇ. 10ರಷ್ಟು ಹೆಚ್ಚಾಗಿದೆ. ಕಾಫಿ, ಟೀ ದರವು 2 ರಿಂದ 3 ರೂವರೆಗೆ ಜಾಸ್ತಿಯಾಗಿದೆ. ಹಾಗೆಯೇ, ದೋಸೆ, ಇಡ್ಲಿ, ವಡೆ, ರೈಸ್‌ಬಾತ್‌, ಬಿಸಿಬೇಳೆ ಬಾತ್‌, ಚೌಚೌ ಬಾತ್‌ ಮತ್ತಿತರ ತಿಂಡಿಗಳ ಬೆಲೆಯೂ 5 ರೂಪಾಯಿಯಷ್ಟು ಹೆಚ್ಚಾಗಿದೆ. ಊಟದ ದರವನ್ನು 5 ರಿಂದ 10 ರೂಪಾಯಿ ವರೆಗೆ ಏರಿಕೆ ಮಾಡಲು ಬೃಹತ್‌ ಬೆಂಗಳೂರು ಹೋಟೆಲ್‌ ಮಾಲೀಕರ ಸಂಘ ತೀರ್ಮಾನಿಸಿದೆ. 

ಯಾವ ಯಾವ ಹಾಲಿನ ಉತ್ಪನ್ನಗಳಿಗೆ ನೂತನ ದರ ಎಷ್ಟು ಅಂತಾ ನೋಡೋದಾದ್ರೆ..?
 
ಟೋಲ್ಡ್ ಮಿಲ್ಕ್ - 39 ಯಿಂದ 42
ಹೋಮೋಜೆನೈಸ್ಡ್ - 40 ಯಿಂದ 43
ಶುಭಂ ಹಾಲು -  45 ಯಿಂದ 48
ಮೊಸರು-  47 ಯಿಂದ 50 
ಮಜ್ಜಿಗೆ 200ml - 8 ಯಿಂದ 9
 
ಹೋಟೆಲ್ ಆಹಾರ ದರ ಎಷ್ಟು ಅಂತಾ ನೋಡೋದಾದ್ರೆ..?
 
ಊಟ -  100 ರಿಂದ 105 ಅಥವಾ 110
ಪೂರಿ (3)- 60 ರಿಂದ 65
ರೈಸ್ ಬಾತ್- 50 ರಿಂದ 55
ಚೌಚೌಬಾತ್-45 ರಿಂದ 55
ಇಡ್ಲಿ ವಡಾ - 60 ರಿಂದ 65
ಕಾಫಿ- ಟೀ - 18 ರಿಂದ 20
ಸಿಲಿಕಾನ್ ಸಿಟಿ ಮಂದಿಗೆ ಇನ್ನು ಮುಂದೆ ಹೋಟೆಲ್ ಊಟ ತಿಂಡಿ ಖಾರ ಖಾರವಾಗಲಿದೆ. ಇನ್ನು ಸತತ ಬೆಲೆ ಏರಿಕೆಯಿಂದಾಗಿ ನಷ್ಟ ಅನುಭವಿಸುತ್ತಿರುವ ಹೋಟೆಲ್ ಉದ್ಯಮಿಗಳು ಬೆಲೆ ಏರಿಕೆಗೆ ಮುಂದಾಗಿದ್ದಾರೆ ಎನ್ನುತ್ತಾರೆ. ಬೆಲೆ ಏರಿಕೆ ಸಾಧ್ಯತೆ ಹೆಚ್ಚಿದ್ದು ಸಾಮಾನ್ಯನ ಜೇಬಿಗೆ ಕತ್ತರಿ ಬೀಳುತ್ತಿದೆ ಎಂದು ಜನ ಸಾಮಾನ್ಯರು ಆಕ್ರೋಶ ಹೊರಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments