ದಯಾಮರಣಕ್ಕೆ ಅರ್ಜಿ ಸಲ್ಲಿಸಿದವರಿಗೆ ಬುದ್ದಿವಾದ

Webdunia
ಮಂಗಳವಾರ, 15 ನವೆಂಬರ್ 2022 (17:20 IST)
ಸಾಗರದಲ್ಲಿ ದಯಾಮರಣಕ್ಕೆ ಮತ್ತೊಂದು ಅರ್ಜಿ ಬಂದಿದ್ದು, ಕಳೆದೊಂದು ತಿಂಗಳಲ್ಲಿ ದಯಾಮರಣಕ್ಕೆ ಮೂರನೇ ಅರ್ಜಿ ಬಂದಂತಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಅರ್ಜಿ ಬಂದಿದೆ. ದಯಾಮರಣಕ್ಕೆ ಅರ್ಜಿ ಸಲ್ಲಿಸಿದವರಿಗೆ ಎ.ಸಿ ಪಲ್ಲವಿ ಸಾತೇನಹಳ್ಳಿ ಹಾಗೂ ತಹಸೀಲ್ದಾರ್ ಮಲ್ಲೇಶ್ ಪೂಜಾರ್ ಬುದ್ದಿ ಹೇಳಿ ಕಳುಹಿಸಿದ್ದಾರೆ. ತಮ್ಮ ಕುಟುಂಬ ಅನುಭವಿಸುತ್ತಿರುವ ಸಂಕಷ್ಟಕ್ಕೆ ಆಡಳಿತ ಸ್ಪಂದಿಸುತ್ತಿಲ್ಲ, ನಾವು ಬದುಕುವುದು ಕಷ್ಟ ಸಾಧ್ಯ ಎನ್ನುವ ಸ್ಥಿತಿ ನಿರ್ಮಾಣವಾಗಿದೆ, ಎಂದು ಹೇಳಿ ದಯಾಮರಣಕ್ಕೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದಾರೆ. ಚನ್ನಗೊಂಡ ಗ್ರಾಮ ಪಂಚಾಯಿತಿಯ ಗುಂಡೋಡಿ ಗ್ರಾಮದ ಧರ್ಮಪ್ಪ ಕುಟುಂಬದಿಂದ ಅರ್ಜಿ ಸಲ್ಲಿಕೆಯಾಗಿದೆ. ಕಳೆದ 25 ವರ್ಷಗಳಿಂದ ಆಸ್ತಿ ವಿಚಾರವಾಗಿ ನನ್ನ ಸಹೋದರ ನಾರಾಯಣಪ್ಪ ಗುಂಡೋಡಿ ಮತ್ತು ಆತನ ಕುಟುಂಬ ಸದಸ್ಯರು ನಮಗೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದಾರೆಂದು ಆರೋಪ ಮಾಡಿದ್ದಾರೆ. ತಮಗೆ ರಕ್ಷಣೆ ನೀಡುವಂತೆ ಕಂದಾಯ ಇಲಾಖೆ ಮತ್ತು ಕಾರ್ಗಲ್ ಪೊಲೀಸ್ ಠಾಣೆಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮಕ್ಕಳ ಸುರಕ್ಷತೆಗಾಗಿ ಬೆಳ್ಳಂಬೆಳ್ಳಗ್ಗೆ ಡ್ಯೂಟಿಗಿಳಿದ ಖಾಕಿ, ಸಿಕ್ಕಿಬಿದ್ದವರಾರು ಗೊತ್ತಾ

ಇದೆಲ್ಲಾ ಕಾಂಗ್ರೆಸ್‌ನವರ ರಾಜಕೀಯ ನಾಟಕ: ಎಚ್‌ಡಿ ಕುಮಾರಸ್ವಾಮಿ

ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಕೊಡಿ, ಶಬರಿಮಲೆ ಚಿನ್ನ ಕಳವು ತನಿಖೆ, ಮೋದಿ

ಮುಂದಿನ ಸುದ್ದಿ
Show comments