Webdunia - Bharat's app for daily news and videos

Install App

ರಾಷ್ಟ್ರ ರಾಜಧಾನಿಯಲ್ಲಿ ಕನಿಷ್ಠ ತಾಪಮಾನ ದಾಖಲು

Webdunia
ಮಂಗಳವಾರ, 2 ನವೆಂಬರ್ 2021 (20:18 IST)
ರಾಷ್ಟ್ರ ರಾಜಧಾನಿಯಲ್ಲಿ ಪ್ರಸಕ್ತ ವರ್ಷದ ಕನಿಷ್ಠ ತಾಪಮಾನ 13.6 ಡಿಗ್ರಿ ಸೆಲ್ಸಿಯಸ್ ಸೋಮವಾರ ರಾತ್ರಿ ದಾಖಲಾಗಿದೆ. ಆದಾಗ್ಯೂ ಪೂರ್ವಾಭಿಮುಖ ಗಾಳಿಯಿಂದಾಗಿ ಸೋಮವಾರ ತಾಪಮಾನ ಅಲ್ಪ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದಕ್ಕೂ ಮುನ್ನ ಅಕ್ಟೋಬರ್ 29ರಂದು ಪ್ರಸಕ್ತ ಋತುವಿನ ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ಸದರ್‌ಜಂಗ್‌ನಲ್ಲಿ ದಾಖಲಾಗಿದೆ. ಆದರೆ ಕನಿಷ್ಠ ತಾಪಮಾನ 13. 6 ಡಿಗ್ರಿ ಸಫ್ದರ್‌ಜಂಗ್‌ನಲ್ಲಿ ದಾಖಲಾಗಿದೆ. ಇದೇ ರೀತಿಯ ಗರಿಷ್ಠ ತಾಪಮಾನ 31.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ, ಇದು ವಾಡಿಕೆಗಿಂತ ಒಂದು ಡಿಗ್ರಿ ಅಧಿಕ.
"ಶುಭ್ರ ಆಕಾಶ ಮತ್ತು ಮಾಲಿನ್ಯ ಅಲ್ಪಮಟ್ಟಿಗೆ ಕಡಿಮೆಯಾಗಿರುವ ಮತ್ತು ಸ್ಥಳೀಯ ವಿಕಿರಣಶೀಲ ಶೀತದ ಕಾರಣದಿಂದ ಸೋಮವಾರ ಸಫ್ದರ್‌ಜಂಗ್‌ನಲ್ಲಿ 13.6 ಡಿಗ್ರಿ ಕನಿಷ್ಠ ತಾಪಮಾನವಿದೆ. ಗಾಳಿಯ ಪೂರ್ವಾಭಿಮುಖವಾಗಿ ಬದಲಾಗಿದೆ, ಕನಿಷ್ಠ ತಾಪಮಾನ ಮಂಗಳವಾರ ಅಲ್ಪಮಟ್ಟಿಗೆ ಹೆಚ್ಚಾಗುತ್ತದೆ" ಎಂದು ಹವಾಮಾನ ಇಲಾಖೆ ಆರ್.ಕೆ.ಜೆನಮಣಿ ಹೇಳಿದ್ದಾರೆ.
ಐಎಂಡಿ ಮುನ್ಸೂಚನೆ ಪ್ರಕಾರ ಮಂಗಳವಾರ ಹಾಗೂ ಬುಧವಾರ ಕನಿಷ್ಠ ತಾಪಮಾನ 15 ಡಿಗ್ರಿ ಆಸುಪಾಸಿನಲ್ಲಿ ಇರಲಿದೆ. ಗುರುವಾರ ಅಲ್ಪ ಇಳಿಕೆಯಾಗುವ ನಿರೀಕ್ಷೆ ಇದೆ. "ಪಶ್ಚಿಮ ಪ್ರಕ್ಷುಬ್ಧತೆ ನವೆಂಬರ್ 1 ರಿಂದ 4 ರವರೆಗೆ ಪರಿಣಾಮ ಬೀರಲಿದೆ. ದಿಲ್ಲಿಯಲ್ಲಿ ಗಾಳಿಯ ದಿಕ್ಕು ಬದಲಾಗಿದ್ದು, ಬೆಟ್ಟ ಪ್ರದೇಶಗಳಲ್ಲಿ ಅಲ್ಪಾವಧಿಯ ನಿರೀಕ್ಷೆಯಿದೆ. ಆದಾಗ್ಯೂ ತಾಪಮಾನ ಕಡಿಮೆಯಾಗುವ ಸಾಧ್ಯತೆಯಿದೆ" ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಗಾಳಿಯ ದಿಕ್ಕು ಪೂರ್ವದಿಂದ ವಾಯವ್ಯಕ್ಕೆ ಬದಲಾಗುವ ಕಾರಣದಿಂದ ನವೆಂಬರ್ 5 ಮತ್ತು 6 ರಂದು ಮತ್ತೆ ತಾಪಮಾನ 13 ಡಿಗ್ರಿಗಳಷ್ಟು ಕುಸಿಯುವ ಅಪಾಯವಿದೆ ಎಂದು ವಿವರಿಸಲಾಗಿದೆ. 2020ರ ನವೆಂಬರ್‌ನಲ್ಲಿ ಕನಿಷ್ಠ ತಾಪಮಾನ 6.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

ಮುಂದಿನ ಸುದ್ದಿ
Show comments