ಪಶುಸಂಗೋಪನಾ ಸಚಿವ ಎ.ಮಂಜು ಕಿರುಕುಳದಿಂದ ಹಾಸನ ಉಪ ವಿಭಾಗಾಧಿಕಾರಿ ಇ.ವಿಜಯಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಆರೋಪಿಸಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಶುಸಂಗೋಪನಾ ಸಚಿವ ಎ.ಮಂಜು ಕಿರುಕುಳದಿಂದ ಇ.ವಿಜಯಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಕುರಿತು ಹೆಚ್ಚುವರಿ ಎಸ್ಪಿ ಶೋಭಾರಾಣಿ ಅವರೆ ನನಗೆ ಮಾಹಿತಿ ನೀಡಿದ್ದರು ಎಂದು ಆರೋಪಿಸಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಬ್ಲ್ಯಾಕ್ ಮೇಲ್ ರಾಜಕೀಯ ನಡೆಯುತ್ತಿದೆ. ಅಧಿಕಾರಿಗಳು ನಿರ್ಭಯವಾಗಿ ಕೆಲಸ ನಿರ್ವಹಿಸುವಂತಿಲ್ಲ ಎಂದು ಆರೋಪಿಸಿದ್ದಾರೆ.
ವಿಭಾಗಾಧಿಕಾರಿ ಇ.ವಿಜಯಾ ಅವರನ್ನು ಹಾಸನಕ್ಕೆ ಕರೆತಂದವರು ಯಾರು? ಅವರನ್ನು ಇಲ್ಲಿಗೆ ವರ್ಗಾವಣೆ ಮಾಡಿಸಿದ್ದು ಯಾರು ಎಂದು ಪ್ರಶ್ನಿಸಿದ್ದು, ಈ ಕುರಿತು ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿ ಹಾಗೂ ಎಎಸ್ಪಿ ಅವರ ಸಂಭಾಷಣೆ ಕುರಿತು ತನಿಖೆ ನಡೆಸಿ. ಎಎಸ್ಪಿ ಶೋಭಾರಾಣಿ ಅವರನ್ನು ಸಹ ವಿಚಾರಣೆ ನಡೆಸಿ ಎಂದು ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.