Webdunia - Bharat's app for daily news and videos

Install App

ಸಚಿವ ಎ.ಮಂಜು ಕಿರುಕುಳದಿಂದ ಇ.ವಿಜಯಾ ಆತ್ಮಹತ್ಯೆಗೆ ಯತ್ನ: ರೇವಣ್ಣ

Webdunia
ಶುಕ್ರವಾರ, 22 ಜುಲೈ 2016 (16:18 IST)
ಪಶುಸಂಗೋಪನಾ ಸಚಿವ ಎ.ಮಂಜು ಕಿರುಕುಳದಿಂದ ಹಾಸನ ಉಪ ವಿಭಾಗಾಧಿಕಾರಿ ಇ.ವಿಜಯಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಜೆಡಿಎಸ್ ನಾಯಕ ಎಚ್‌.ಡಿ.ರೇವಣ್ಣ ಆರೋಪಿಸಿದ್ದಾರೆ.
 
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಶುಸಂಗೋಪನಾ ಸಚಿವ ಎ.ಮಂಜು ಕಿರುಕುಳದಿಂದ ಇ.ವಿಜಯಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಕುರಿತು ಹೆಚ್ಚುವರಿ ಎಸ್‌ಪಿ ಶೋಭಾರಾಣಿ ಅವರೆ ನನಗೆ ಮಾಹಿತಿ ನೀಡಿದ್ದರು ಎಂದು ಆರೋಪಿಸಿದ್ದಾರೆ.
 
ಹಾಸನ ಜಿಲ್ಲೆಯಲ್ಲಿ ಬ್ಲ್ಯಾಕ್ ಮೇಲ್ ರಾಜಕೀಯ ನಡೆಯುತ್ತಿದೆ. ಅಧಿಕಾರಿಗಳು ನಿರ್ಭಯವಾಗಿ ಕೆಲಸ ನಿರ್ವಹಿಸುವಂತಿಲ್ಲ ಎಂದು ಆರೋಪಿಸಿದ್ದಾರೆ.
 
ವಿಭಾಗಾಧಿಕಾರಿ ಇ.ವಿಜಯಾ ಅವರನ್ನು ಹಾಸನಕ್ಕೆ ಕರೆತಂದವರು ಯಾರು? ಅವರನ್ನು ಇಲ್ಲಿಗೆ ವರ್ಗಾವಣೆ ಮಾಡಿಸಿದ್ದು ಯಾರು ಎಂದು ಪ್ರಶ್ನಿಸಿದ್ದು, ಈ ಕುರಿತು ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
 
ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿ ಹಾಗೂ ಎಎಸ್‌ಪಿ ಅವರ ಸಂಭಾಷಣೆ ಕುರಿತು ತನಿಖೆ ನಡೆಸಿ. ಎಎಸ್‌ಪಿ ಶೋಭಾರಾಣಿ ಅವರನ್ನು ಸಹ ವಿಚಾರಣೆ ನಡೆಸಿ ಎಂದು ಜೆಡಿಎಸ್ ನಾಯಕ ಎಚ್‌.ಡಿ.ರೇವಣ್ಣ ತಿಳಿಸಿದ್ದಾರೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments