Webdunia - Bharat's app for daily news and videos

Install App

ಜೆಡಿಎಸ್ ಶಾಸಕನ ಸಹೋದರನಿಗೆ ಸಚಿವ ಎ.ಮಂಜು ಬೆದರಿಕೆ ಆರೋಪ

Webdunia
ಗುರುವಾರ, 13 ಅಕ್ಟೋಬರ್ 2016 (16:22 IST)
ಪಶುಸಂಗೋಪನಾ ಸಚಿವ ಎ.ಮಂಜು ಅವರ ಬೆದರಿಕೆಗೆ ಹೆದರಿ ನನ್ನ ಸಹೋದರ ವಿಆರ್‌ಎಸ್ ತೆಗೆದುಕೊಂಡಿದ್ದಾನೆ ಎಂದು ಹಾಸನ ಜೆಡಿಎಸ್ ಶಾಸಕ ಎಚ್.ಎಸ್.ಪ್ರಕಾಶ್ ಗಂಭೀರವಾಗಿ ಆರೋಪಿಸಿದ್ದಾರೆ. 
 
ಪಶುಸಂಗೋಪನಾ ಸಚಿವ ಎ.ಮಂಜು ಅವರು ನನ್ನ ಸಹೋದರ ಡಾ.ಮೋಹನ ದಾಸ್‌ಗೆ ನೀನು ಭ್ರಷ್ಟಾಚಾರ ಮಾಡಿದ್ದೀಯಾ ಎಂದು ಬೆದರಿಕೆ ಒಡ್ಡಿದ್ದರು. ಇದರಿಂದ ಮನನೊಂದು ಆತ ಪಶುಸಂಗೋಪನಾ ಇಲಾಖೆಯ ಎಡಿ ಹುದ್ದೆಯಿಂದ ಸ್ವಯಂ ನಿವೃತ್ತಿ ತೆಗೆದುಕೊಂಡಿದ್ದಾನೆ ಎಂದು ಶಾಸಕ ಎಚ್.ಎಸ್.ಪ್ರಕಾಶ್ ದೂರಿದರು.
 
ಪಶುಸಂಗೋಪನಾ ಇಲಾಖೆಯಲ್ಲಿ ನನ್ನ ಸಹೋದರ ಡಾ.ಮೋಹನ ದಾಸ್‌ ಭ್ರಷ್ಟಾಚಾರ ಮಾಡಿರುವುದನ್ನು ಸಚಿವ ಎ.ಮಂಜು ಸಾಬೀತುಪಡಿಸಬೇಕು ಎಂದು ಶಾಸಕ ಎಚ್.ಎಸ್.ಪ್ರಕಾಶ್ ನೇರ ಸವಾಲ್ ಎಸೆದಿದ್ದಾರೆ. 
 
ನಾನು ಬೆದರಿಕೆ ಒಡ್ಡಿಲ್ಲ: ಸಚಿವ ಎ.ಮಂಜು
 
ಪಶುಸಂಗೋಪನಾ ಇಲಾಖೆಯ ಎಡಿ ಆಗಿದ್ದ ಡಾ.ಮೋಹನ ದಾಸ್‌ಗೆ ನಾನು ಬೆದರಿಕೆ ಒಡ್ಡಿಲ್ಲ. ಅವರ ವಿರುದ್ಧ ದೂರು ಬಂದಿದ್ದಕ್ಕೆ ಎಚ್ಚರಿಕೆ ನೀಡಿದ್ದೆ. ತಪ್ಪು ತಿಳಿದುಕೊಂಡು ವಿಆರ್‌ಎಸ್ ಪಡೆದರೇ ನಾನು ಜವಾಬ್ದಾರನಲ್ಲ ಎಂದು ಸಚಿವ ಎ.ಮಂಜು ಸ್ಪಷ್ಟಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments