Webdunia - Bharat's app for daily news and videos

Install App

ವೇಶ್ಯಾವಾಟಿಕೆ ಅಡ್ಡೆ ಹೇಳಿಕೆ: ಪರಮೇಶ್ವರ್ ಪತ್ರಕ್ಕೆ ಉತ್ತರ ಬರೆದ ಸಚಿವ ಅಂಜನೇಯ

Webdunia
ಶುಕ್ರವಾರ, 20 ಮೇ 2016 (18:07 IST)
ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಹಣದಾಸೆಗೆ ಈ ರೀತಿ ವರ್ತಿಸುತ್ತಿವೆ. ನೊಂದ ಜನರ ಗೋಳು ಕೇಳಿ ಆಕ್ರೋಶದಿಂದ ಹೀಗೆ ಹೇಳಿಕೆ ನೀಡಿರುವುದಾಗಿ ಸಚಿವ ಅಂಜನೇಯ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್‌ ಪತ್ರಕ್ಕೆ ಉತ್ತರಿಸಿದ್ದಾರೆ. 
 
ನನ್ನ ಹೇಳಿಕೆಯಿಂದ ಸರಕಾರದ ವರ್ಚಸಿಗೆ ಧಕ್ಕೆ ಬರುವುದಿಲ್ಲ ಎಂದು ಭಾವಿಸುವುದಾಗಿ ಸಚಿವ ಅಂಜನೇಯ್ ಹೇಳಿದ್ದಾರೆ.
 
ಖಾಸಗಿ ಶಾಲೆಗಳು ವೇಶ್ಯಾವಾಟಿಕೆ ಅಡ್ಡಿಗಿಂತಲೂ ಕಡೆ ಎಂದು ನಾನು ಯಾವತ್ತೂ ಹೇಳಿಲ್ಲ. ವೇಶ್ಯಾವಾಟಿಕೆ ರೀತಿಯಲ್ಲಿ ವರ್ತಿಸುತ್ತಿವೆ ಎಂದು ಹೇಳಿಕೆ ನೀಡಿರುವುದಾಗಿ ತಿಳಿಸಿದ್ದಾರೆ.
 
ಕೆಲ ದಿನಗಳ ಹಿಂದೆ ಸರಕಾರ ಶಾಲೆಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಚಿವ ಎಚ್‌. ಆಂಜನೇಯ, ಖಾಸಗಿ ಶಾಲೆಗಳು ಶಿಕ್ಷಣವನ್ನು ವ್ಯಾಪಾರಿಕರಣ ಮಾಡಿಕೊಂಡಿವೆ ಎಂದು ಟೀಕಿಸಿದ್ದರು. ಸರಕಾರದ ನೀತಿ ನಿಯಮಗಳನ್ನು ಗಾಳಿಗೆ ತೂರಿ, ಹಣಕ್ಕಾಗಿ ಶಿಕ್ಷಣವನ್ನು ಮಾರಾಟ ಮಾಡುತ್ತಿರುವ ಖಾಸಗಿ ಶಾಲೆಗಳು ವೇಶ್ಯಾವಾಟಿಕೆ ಅಡ್ಡಿಗಿಂತಲೂ ಕಡೆಯಾಗಿದೆ ಎಂದು ಹೇಳಿಕೆ ನೀಡಿದ್ದರು. 
 
ರಾಜ್ಯ ಸರಕಾರದ ಸಚಿವರು ಇಂತಹ ಕೀಳು ಮಟ್ಟದ ಹೇಳಿಕೆ ನೀಡುವುದು ಅಸಮಂಜಸ, ಎಚ್‌. ಆಂಜನೇಯ ಯಾವ ಉದ್ದೇಶದಿಂದ ಇಂತಹ ಹೇಳಿಕೆ ನೀಡಿದ್ದಾರೆ ತಿಳಿಯದು. ತಮ್ಮ ಹೇಳಿಕೆಯ ಕುರಿತು ಸ್ಪಷ್ಟಪಡಿಸುವಂತೆ ಗೃಹ ಸಚಿವ  ಜಿ.ಪರಮೇಶ್ವರ್ ನಿನ್ನೆಯಷ್ಟೇ ಆಂಜನೇಯ ಅವರಿಗೆ ಪತ್ರ ಬರೆದಿದ್ದರು.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments