Webdunia - Bharat's app for daily news and videos

Install App

ಚೆಲುವರಾಯಸ್ವಾಮಿಗೆ ಭರ್ಜರಿಯಾಗಿ ಟಾಂಗ್ ನೀಡಿದ ಸಚಿವ ಪುಟ್ಟರಾಜು

Webdunia
ಮಂಗಳವಾರ, 9 ಅಕ್ಟೋಬರ್ 2018 (14:03 IST)
ಮಂಡ್ಯದಲ್ಲಿ ಮೈತ್ರಿ ಬೇಡ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಹಾಕುವಂತೆ ವರಿಷ್ಠ ರಲ್ಲಿ ಮನವಿ ಮಾಡ್ತೀನಿ. ವಿಧಾನಸಭೆಯಲ್ಲಿ ಏಳಕ್ಕೆ ಏಳು ಕ್ಷೇತ್ರಗಳನ್ನ ಗೆದ್ದ ಮಾತ್ರಕ್ಕೆ ಜೆಡಿಎಸ್ ಗೆ ಲೋಕಸಭೆ ಗೆಲವು ಸುಲಭವಲ್ಲ ಎಂದಿದ್ದ ಮಾಜಿ ಸಚಿವ ಚೆಲುವರಾಯಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಚಿವ ಸಿ.ಎಸ್. ಪುಟ್ಟರಾಜು, ಡೆಡ್ ಹಾರ್ಸ್ ಗಳೆಲ್ಲಾ‌ ಮಾತನಾಡುವುದು ಹಾಗೇಯೇ ಎಂದು ತಿರುಗೇಟು ನೀಡಿದ್ದಾರೆ.

ಚೆಲುವರಾಯಸ್ವಾಮಿ ಅವ್ರನ್ನು ಸತ್ತ ಕುದುರೆಗೆ ಹೋಲಿಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಣ್ಣನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ಮಂಡ್ಯದಲ್ಲಿ ಮೈತ್ರಿಯಾಗಿ ಎಂದು ನಾವು ಯಾರನ್ನು ಗೋಗರೆಯುತ್ತಿಲ್ಲ,
ಜನ‌ ಕೊಟ್ಟ ತೀರ್ಪಿನಿಂದ, ಅನಿವಾರ್ಯತೆ ಎದುರಾಗಿದ್ರಿಂದ ಸಮ್ಮಿಶ್ರ ಸರ್ಕಾರ ರಚನೆಯಾಗಿದೆ.

ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ನಿಟ್ಟಿನಲ್ಲಿ‌ ನಾಯಕರು ರಾಜ್ಯದಲ್ಲಿ ಮೈತ್ರಿಗೆ‌‌‌ ಸಮ್ಮತಿಸಿದ್ದಾರೆ. ಮಂಡ್ಯ ಜೆಡಿಎಸ್ ನ ಭದ್ರಕೋಟೆ, ಹೀಗಾಗಿ ನಾವು ಮೈತ್ರಿ ಮಾಡಿಕೊಳ್ಳಿ‌ ಎಂದು ಯಾರನ್ನು ಗೋಗರೆಯುವುದಿಲ್ಲ. ನಾಗಮಂಗಲ ಇತಿಹಾಸದಲ್ಲಿ 52 ಸಾವಿರ ಲೀಡ್ ನಿಂದ ಗೆದ್ದ ಇತಿಹಾಸವಿಲ್ಲ. ಚೆಲುವರಾಯಸ್ವಾಮಿ ಅವ್ರನ್ನ ಜನರು ಸೋಲಿಸಿದ್ದು ಬಾಯಿಮುಚ್ಚಿಕೊಂಡು ಇರಲಿ ಅಂತ. ಡೆಡ್ ಹಾರ್ಸ್ ಗಳೆಲ್ಲಾ ಮಾತನಾಡಿದರೆ ಹೀಗೇ ಆಗಿರೋದು ಎಂದು ಚೆಲುವರಾಯಸ್ವಾಮಿ ಗೆ ಟಾಂಗ್ ನೀಡಿದ್ದಾರೆ. ನಮ್ಮ ಪಕ್ಷದ ವರಿಷ್ಠರು ಯಾರನ್ನ ಅಭ್ಯರ್ಥಿ ಮಾಡಿದ್ರು ಸ್ವಾಗತ ಮಾಡ್ತೀವಿ. ದೇವೆಗೌಡರ‌ ಕುಟುಂಬದಿಂದ ಅಭ್ಯರ್ಥಿ ಹಾಕಿದ್ರು ಸ್ವಾಗತಿಸುತ್ತೇವೆ. ನಮ್ಮ‌ ಪಕ್ಷದಲ್ಲಿ ಬಹಳ ಜನ ಸಮರ್ಥರಿದ್ದಾರೆ. ಆದ್ರೆ ನಾನು ಯಾರನ್ನು ಸೂಚಿಸುವುದಿಲ್ಲ, ನಮ್ಮ ವರಿಷ್ಠರು ಯಾರನ್ನೇ ಆಯ್ಕೆ ಮಾಡಿದ್ರು ನಾವು ಅವ್ರನ್ನು ಗೆಲ್ಲಿಸಿಕೊಡ್ತೇವೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments