Select Your Language

Notifications

webdunia
webdunia
webdunia
webdunia

ಸಚಿವ ಡಿ.ಕೆ ಶಿವಕುಮಾರ್‌ರಿಂದ ಹತ್ಯೆಗೆ ಸಂಚು: ಕಲ್ಲಹಳ್ಳಿ ಆರೋಪ

ಇಂಧನ ಸಚಿವ
ಬೆಂಗಳೂರು , ಶುಕ್ರವಾರ, 16 ಸೆಪ್ಟಂಬರ್ 2016 (18:11 IST)
ಇಂಧನ ಸಚಿವ ಡಿ.ಕೆ ಶಿವಕುಮಾರ್ ಮತ್ತು ಅವರ ಸಹೋದರ ಸಂಸದ ಡಿ.ಕೆ ಸುರೇಶ್ ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಗಂಭೀರ ಆರೋಪ ಮಾಡಿದ್ದಾರೆ. 
 
ಅಲ್ಲದೇ ನನ್ನ ಪ್ರಾಣಕ್ಕೆ ಏನಾದರೂ ಆಪತ್ತು ಎದುರಾದರೆ ಅದಕ್ಕೆ ಈ ಇಬ್ಬರು ಸಹೋದರರು ಮತ್ತು ರಾಮನಗರ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಇಕ್ಬಾಲ್ ಹುಸೇನ್ ಕಾರಣರಾಗುತ್ತಾರೆ ಎಂದು ನೇರವಾಗಿ ಆರೋಪಿಸಿದ್ದಾರೆ. 
 
ಈ ಮೂವರು ಅಕ್ರಮ ಕಲ್ಲು ಗಣಿಗಾರಿಕೆ ಮಾಡುತ್ತಿದ್ದು, ಈ ಕುರಿತು ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದೇನೆ. ಏರಂದಪ್ಪನಹಳ್ಳಿಯಲ್ಲಿನ ಗಣಿಗಾರಿಕೆ ಪ್ರಕರಣವನ್ನು ಬೆಳಕಿಗೆ ತಂದಿದ್ದಕ್ಕೆ ಈ ಮೂವರು ನನ್ನನ್ನು ಕೊಲೆ ಮಾಡಲು ಹೊರಟಿದ್ದಾರೆ. 
 
ಈ ಕುರಿತು ರಾಜ್ಯಪಾಲರಿಗೂ ಕೂಡ ಮನವಿ ಪತ್ರ ನೀಡಿದ್ದೇನೆ. ರಾಜ್ಯಸಬಾ ಸದಸ್ಯ, ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಮೂಲಕ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲು ಪ್ರಯತ್ನಿಸುತ್ತಿದ್ದೇನೆ ಎಂದಿರುವ ಅವರು ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನರೇಂದ್ರ ಮೋದಿ ಜನ್ಮದಿನಾಚರಣೆ : ನಾಲ್ಕು ದಾಖಲೆ ಗುರಿ