Webdunia - Bharat's app for daily news and videos

Install App

ಔತಣಕೂಟದ ಹಣ ಸಿಎಂ ಪರಿಹಾರ ನಿಧಿಗೆ ನೀಡಿದ ಸಚಿವ…!

Webdunia
ಬುಧವಾರ, 22 ಆಗಸ್ಟ್ 2018 (16:09 IST)
ಕೊಡಗಿನ ಸಂತ್ರಸ್ತರಿಗೆ ನೆರವಿಗೆ ಮಗನ ಬೀಗರ ಔತಣಕೂಟವನ್ನು ರದ್ದು ಮಾಡಿ, ಆ ಹಣವನ್ನು ಮಡಿಕೇರಿ ಸಂತ್ರಸ್ತರಿಗಾಗಿ ಸಿಎಂ ಪರಿಹಾರ ನಿಧಿಗೆ ಕೊಡಲು ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ನಿರ್ಧರಿಸಿದ್ದಾರೆ. 

ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪುತ್ರ ಶಿವರಾಜು ಅವ್ರ ಬೀಗರ ಔತಣಕೂಟ ರದ್ದು ಮಾಡಿ ಕೊಡಗಿನ ಸಂತ್ರಸ್ತರಿಗೆ ನೆರವಾಗಲು ನಿರ್ಧರಿಸಿದ್ದು, ಕೊಡಗಿನ ಸಂತ್ರಸ್ತರ ನೆರವಿಗೆ ಪುಟ್ಟರಾಜು ಅವರಿಂದ 10 ಲಕ್ಷ ರೂ.ದೇಣಿಗೆ ಕೊಡಲಾಗುವುದು. ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ಅರ್ಪಿಸುತ್ತೇವೆ ಎಂದ್ರು. ಕೆಲವು ದಿನಗಳ ಹಿಂದೆ ಪುಟ್ಟರಾಜು ಪುತ್ರ ಶಿವರಾಜು ಅವ್ರ ವಿವಾಹ ನಡೆದಿತ್ತು.

ಭಾನುವಾರ ನಿಗದಿಯಾಗಿದ್ದ ಬೀಗರ ಔತಣ ರದ್ದು ಮಾಡಿದ ಸಿ.ಎಸ್. ಪುಟ್ಟರಾಜು, ಇದೀಗ ಬೀಗರ ಔತಣ ಕೂಟದ ಹಣವನ್ನು ಸಂತ್ರಸ್ತರಿಗೆ ನೀಡಲು ತೀರ್ಮಾನಿಸಿದ್ದಾರೆ. ಕೊಡಗಿನ ಜನತೆ ಸಂಕಷ್ಟದಲ್ಲಿರುವಾಗ ನಾವು ಸಂಭ್ರಮದ ಆಚರಣೆ ಮಾಡುವುದು ಸರಿಯಲ್ಲ‌ ಎಂದು ಸಿ.ಎಸ್ ಪುಟ್ಟರಾಜು ಹೇಳಿದ್ದಾರೆ. 

 



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments