Webdunia - Bharat's app for daily news and videos

Install App

ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಸಾಹಿತಿಗಳೊಂದಿಗೆ ಸಚಿವರ ಸಂವಾದ

Webdunia
ಮಂಗಳವಾರ, 24 ಆಗಸ್ಟ್ 2021 (20:25 IST)
ಕಲಬುರ್ಗಿ: ಸರ್ಕಾರ ಜಾರಿಗೊಳಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯು (ಎನ್.ಇ.ಪಿ.-2020) ಶೈಕ್ಷಣಿಕ ಸಂಸ್ಥೆಗಳ ಸ್ವಾಯತ್ತತೆಯ ಜೊತೆಗೆ ಸಂಬಂಧಿಸಿದ ಆಡಳಿತಾತ್ಮಕ ವಿಕೇಂದ್ರಕರಣಕ್ಕೂ ಒತ್ತು ನೀಡುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು. 
 
ಮಂಗಳವಾರ ಇಲ್ಲಿಗೆ ಒಂದು ದಿನದ ಅಧಿಕೃತ ಭೇಟಿ ನೀಡಿದ್ದ ಸಂದರ್ಭದಲ್ಲಿ ಎನ್.ಇ.ಪಿ. ಕುರಿತು ಸಾಹಿತಿಗಳೊಂದಿಗೆ ಸಂವಾದ ನಡೆಸಿದ ಅವರು, ಜಾಗತಿಕ ಸ್ಪರ್ಧೆಯನ್ನು ಸಮರ್ಥವಾಗಿ ಎದುರಿಸಲು ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವುದೇ ಈ ಸ್ವಾಯತ್ತತೆ ಮತ್ತು ವಿಕೇಂದ್ರಕರಣದ ಆಶಯವಾಗಿದೆ ಎಂದು ವಿವರಿಸಿದರು. 
 
ಸುಮಾರು ಐದೂವರೆ ವರ್ಷಗಳ ದೀರ್ಘಕಾಲದ ಸಮಾಲೋಚನೆ ಹಾಗೂ 3 ಲಕ್ಷಕ್ಕೂ ಹೆಚ್ಚು ಸಲಹೆಗಳನ್ನು ಕ್ರೋಡೀಕರಿಸಿ ಎನ್.ಇ.ಪಿ. ಕರಡು ರೂಪಿಸಲಾಗಿದೆ. ಇದು ನಮ್ಮ ತನವನ್ನು ಉಳಿಸಿಕೊಂಡೇ ಜಾಗತಿಕ ಪೈಪೋಟಿಯಲ್ಲಿ ಯಶಸ್ವಿಯಾಗಬೇಕೆಂಬ ಆಶಯ ಹೊಂದಿದೆ. ಕನ್ನಡ ಭಾಷೆಗಾಗಲೀ ಅಥವಾ  ನಮ್ಮ ಭಾರತದ ಇನ್ನಿತರ ಭಾಷೆಗಾಗಲೀ ಇದರಿಂದ ಧಕ್ಕೆಯಾಗುವುದಿಲ್ಲ. ಪದವಿ ಹಂತದಲ್ಲಿ ಎರಡು ವರ್ಷಗಳ ಅವಧಿಗೆ ಕನ್ನಡ ಕಲಿಕೆಯನ್ನು ಕಡ್ಡಾಯ ಮಾಡಿರುವುದರ ಜೊತೆಗೆ ಉನ್ನತ ಶಿಕ್ಷಣದ ಕೋರ್ಸ್ ಗಳನ್ನು ಪ್ರಾದೇಶಿಕ ಭಾಷೆಯಲ್ಲೂ ಕಲಿಸುವ ವ್ಯವಸ್ಥೆ ಜಾರಿಗೊಳ್ಳಲಿದೆ. ಈ ಕ್ರಮಗಳಿಂದಾಗಿ, ನಮ್ಮ ಭಾಷೆಗಳು ಮತ್ತಷ್ಟು ಬಲಗೊಳ್ಳಲಿವೆ ಎಂದು ಅಶ್ವತ್ಥ ನಾರಾಯಣ ವಿವರಿಸಿದರು. 
 
ಸರ್ಕಾರಿ ವ್ಯವಸ್ಥೆಯಲ್ಲಿ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ  ಈ ನೀತಿಯು ವಿದ್ಯಾರ್ಥಿಗಳಿಗೆ ಕಲಿಕೆಯ ಅವಕಾಶಗಳನ್ನು ಹೆಚ್ಚಿಸುತ್ತದೆ. ಹಾಗೆಯೇ ಬೋಧಕರಿಗೆ ತಮ್ಮ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಅವಕಾಶ ಕಲ್ಪಿಸುತ್ತದೆ. ಶೈಕ್ಷಣಿಕ ಸಂಸ್ಥೆಗಳ ಆಡಳಿತ ಮಂಡಳಿಗಳಲ್ಲೂ ಚಲನಶೀಲತೆಯನ್ನು ಮೂಡಿಸುತ್ತದೆ. ವಿದ್ಯಾರ್ಥಿಗಳಲ್ಲಿ ಜ್ಞಾನದ ಜೊತೆಗೆ ಕೌಶಲಗಳನ್ನು ಬೆಳೆಸಲು ಸಹಕಾರಿ. ಒಟ್ಟಾರೆ ವಿದ್ಯಾರ್ಥಿಗಳನ್ನು ಪರಿಪೂರ್ಣ ವ್ಯಕ್ತಿಗಳನ್ನಾಗಿಸುವ ಆಶಯ ಹೊಂದಿದ ಸಮಗ್ರ ದೃಷ್ಟಿಕೋನದ ನೀತಿ ಇದಾಗಿದೆ ಎಂದರು.
ಇದೇ ವೇಳೆ ಸಾಹಿತಿಗಳು ಕೆಲವು ಬೇಡಿಕೆಗಳಿರುವ ಮನವಿ ಪತ್ರವನ್ನು ಸಚಿವರಿಗೆ ನೀಡಿದರು. ವಿಕ್ರಮ ವಿಸಾಜಿ, ಶಂಕರಯ್ಯ ಆರ್.ಘಂಟಿ, ಬಸವರಾಜ ಡೋಣೂರ, ಎಚ್.ಟಿ.ಪೋತೆ, ಪ್ರಭಾಕರ ಜೋಶಿ, ಡಾ.ಸುಜಾತಾ ಜಂಗಮಶೆಟ್ಟಿ ಮತ್ತಿತರರು ಇದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments