Webdunia - Bharat's app for daily news and videos

Install App

ರಂಗ ಸಂಘಟಕ ಡಿ.ಕೆ ಚೌಟ ಅಗಲಿಕೆಗೆ ಸಚಿವ ಡಿಕೆ ಶಿವಕುಮಾರ್ ಸಂತಾಪ

Webdunia
ಬುಧವಾರ, 19 ಜೂನ್ 2019 (15:55 IST)
ರಂಗಭೂಮಿಯ ಹಿರಿಯ ಜೀವಿ, ರಂಗ ನಿರಂತರ ಕಾರ್ಯಾಧ್ಯಕ್ಷರಾಗಿದ್ದ ಡಿ.ಕೆ.ಚೌಟ (82) ಜಯದೇವ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದು, ಅವರ ಅಗಲಿಕೆಗೆ ಜಲ ಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

"ಹಿರಿಯ ರಂಗ ಸಂಘಟಕ ಡಿ.ಕೆ ಚೌಟ ಅವರ ನಿಧನವಾರ್ತೆ ಬೇಸರ ತಂದಿದೆ. ಉದ್ಯಮಿಯಾಗಿದ್ದರೂ ರಂಗಭೂಮಿ, ಸಾಹಿತ್ಯ ಹಾಗೂ ಕಲಾಸೇವೆಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದ ಚೌಟ ಅವರು ವಿಶೇಷ ವ್ಯಕ್ತಿತ್ವ ಹೊಂದಿದ್ದವರು. 'ಆನಂದ ಕೃಷ್ಣ' ಎಂಬ ಕಾವ್ಯನಾಮದಿಂದ ಖ್ಯಾತಿ ಪಡೆದಿದ್ದ ಅವರು, 'ಕರಿಯವಜ್ಜೆರೆನ ಕಥೆಕ್ಕುಲು', 'ಫ್ಲಿತಿಪಥಿಗಡಸು', 'ಪಟ್ಟು ಪಜ್ಜೆಲು', 'ದರ್ಮೆಟ್ಟಿಮಾಯೆ', 'ಉರಿ ಉಷ್ಣದ ಮಾಯೆ', 'ಮಿಟ್ಟಬೈಲು ಯಮುನಕ್ಕ' ಸೇರಿದಂತೆ ಅನೇಕ ಕೃತಿಗಳನ್ನು ರಚಿಸಿದ್ದು, ತುಳು ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.

ಅವರ 'ಫ್ಲಿತಿಪಥಿಗಡಸು' ನಾಟಕ ರಚನೆಗೆ ಕರ್ನಾಟಕ ಸರ್ಕಾರ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿದೆ. ಇವರ ಸಾಹಿತ್ಯ ಸೇವೆಗೆ ಗೌರವ ಡಾಕ್ಟರೇಟ್ ಕೂಡ ಲಭಿಸಿದೆ. ಅವರು ಸಾಹಿತ್ಯ ರಚನೆ ಅಷ್ಟೇ ಅಲ್ಲದೆ ರಂಗಭೂಮಿಯಲ್ಲೂ ತೊಡಗಿಸಿಕೊಂಡು ಹೆಸರು ಮಾಡಿದ್ದರು ಎಂದು ಸಚಿವ ಶಿವಕುಮಾರ್ ಗುಣಗಾನ ಮಾಡಿದ್ದಾರೆ.

ಚಿತ್ರಕಲಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿರುವ ಚೌಟ ಅವರ ನಿಧನ ನಮ್ಮ ಸಾಹಿತ್ಯ ಹಾಗೂ ರಂಗಭೂಮಿ ಕ್ಷೇತ್ರಕ್ಕೆ ದೊಡ್ಡ ನಷ್ಟ. ಅವರ ಅಗಲಿಕೆಯ ನೋವನ್ನು ಅವರ ಕುಟುಂಬ ಸದಸ್ಯರು, ಬಂಧು-ಬಳಗದವರಿಗೆ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅವರು ಸಂತಾಪಸೂಚಕ ಹೇಳಿಕೆಯಲ್ಲಿ ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಹರಿಯಾಣ: ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ಪತಿಯನ್ನೇ ಮುಗಿಸಿದ ಪತ್ನಿ

Viral video: ಪುರಿ ಜಗನ್ನಾಥ ಮಂದಿರದಲ್ಲಿ ವಿಸ್ಮಯ: ಕೇಸರಿ ವಸ್ತ್ರ ಹೊತ್ತು ದೇಗುಲಕ್ಕೆ ಸುತ್ತು ಹಾಕಿದ ಗರುಡ ಹೋಗಿದ್ದೆಲ್ಲಿಗೆ

ಭಾರತದಲ್ಲಿ ವಾಡಿಕೆಗಿಂದ ಅಧಿಕ ಮಳೆ: ಮುಂಗಾರು ಪ್ರವೇಶದ ಬಗ್ಗೆ ಹವಾಮಾನ ಇಲಾಖೆ ಹೇಳಿದ್ದೇನು

ಮುಂದಿನ ಸುದ್ದಿ
Show comments