Webdunia - Bharat's app for daily news and videos

Install App

ಕ್ಷೇತ್ರದ ಜನರ ಸೇವೆಗೆ ಮುಂದಾದ ಸಚಿವ ಡಿಕೆಶಿ

Webdunia
ಬುಧವಾರ, 1 ಆಗಸ್ಟ್ 2018 (16:49 IST)
ನನ್ನ ಕ್ಷೇತ್ರದ ಜನರು ನನ್ನ ಮೇಲೆ ನಂಬಿಕೆಯನ್ನಿಟ್ಟು ನನ್ನನ್ನ ಗೆಲ್ಲಿಸಿ ಕಳುಹಿಸಿದ್ದಾರೆ. ಅವರ ಕಷ್ಟಕ್ಕಾಗದಿದ್ದರೂ ಅವರ ನೋವಿಗಾದ್ರು ಸ್ಪಂದಿಸಬೇಕು. ಎಷ್ಟೋ ಜನ ದೂರವಾಣಿ ಕರೆ ಮಾಡಿ ಹೇಳ್ತಿರ್ತಾರೆ. ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಗಳಿಗೆ ಹೋದ್ರೆ ಲಕ್ಷಾಂತರ ರೂಪಾಯಿ ಬಿಲ್ ಮಾಡ್ತಾರೆ. ಬಡವರಾದ ನಾವು ಎಲ್ಲಿಂದ ಕಟ್ಟಲು ಸಾಧ್ಯ ಅಂತ, ಹಾಗಾಗಿ ಅದನ್ನು ಗಮನದಲ್ಲಿಟ್ಟುಕೊಂಡು ಮೆಡಿಕಲ್ ಕಾಲೇಜನ್ನ ಈ ಬಜೆಟ್ ನಲ್ಲಿ ಮಂಡಿಸಿದ್ದೇವೆ ಹೀಗಂತ ಪ್ರಭಾವಿ ಸಚಿವರು ತಿಳಿಸಿದ್ದು, ಅವರ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಶೀಘ್ರದಲ್ಲಿ ಆರಂಭಗೊಳ್ಳಲಿದೆ ಎಂದರು.  

ಸಚಿವ ಡಿ.ಕೆ. ಶಿವಕುಮಾರ್ ರಾಮನಗರದಲ್ಲಿ ಮೆಡಿಕಲ್ ಕಾಲೇಜ್ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಿದರು.
ರಾಮನಗರ ಜಿಲ್ಲೆ ಕನಕಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಬಜೆಟ್ ನಲ್ಲಿ ಮಂಡನೆಯಾದಂತೆ, ಅಧಿಕಾರಿಗಳು ಪರಿಶೀಲನೆ ಮಾಡಿದ ಸ್ಥಳಕ್ಕೆ ಸಚಿವ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು.

ಕನಕಪುರದ ಸರ್ಕಾರಿ ಆಸ್ಪತ್ರೆಯನ್ನು ಮುನ್ನೂರು ಬೆಡ್ಡ್ ಗಳಿಂದ ನಾಲ್ಕನೂರು ಬೆಡ್ ಗಳಿಗೆ ಏರಿಸಿ ತಾಲೂಕಿನ ಸುತ್ತಮುತ್ತಲ ಹಳ್ಳಿಯ ಜನತೆಗೆ ಅನುಕೂಲಕರವಾಗುವಂತೆ ಮಾಡಲು ಈಗಾಗಲೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇನ್ನೆರಡು ವರ್ಷಗಳಲ್ಲಿ ಮೆಡಿಕಲ್ ಕಾಲೇಜಿನ ಕಾಮಗಾರಿ ಪೂರ್ಣಗೊಳಿಸಲಾಗುವುದು. ಜನರ ಸೇವೆಗಾಗಿ ಕರ್ತವ್ಯ ನಿರ್ವಹಿಸುವುದಾಗಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments