Webdunia - Bharat's app for daily news and videos

Install App

ಜನೌಷಧಿ ಸರ್ಕಾರೀ ಆಸ್ಪತ್ರೆ ಬಳಿ ಬೇಡ ಅಷ್ಟೇ ಎಂದ ಸಚಿವ ಶರಣಪ್ರಕಾಶ್ ಪಾಟೀಲ್: ನೆಟ್ಟಿಗರ ಪ್ರತಿಕ್ರಿಯೆ ನೋಡಿ

Krishnaveni K
ಬುಧವಾರ, 9 ಜುಲೈ 2025 (14:10 IST)
ಬೆಂಗಳೂರು: ಕೇಂದ್ರ ಸರ್ಕಾರದ ರಿಯಾಯಿತಿ ದರದಲ್ಲಿ ಔಷಧಿ ನೀಡುವ ಜನೌಷಧಿ ಕೇಂದ್ರಗಳನ್ನು ಸರ್ಕಾರೀ ಆಸ್ಪತ್ರೆಗಳ ಆವರಣದಲ್ಲಿ ತೆರೆಯುವುದು ಬೇಡ ಎನ್ನುತ್ತಿದ್ದೇವೆ ಅಷ್ಟೇ ಎಂದು ಸಚಿವ ಡಾ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಇದಕ್ಕೆ ನೆಟ್ಟಿಗರ ಪ್ರತಿಕ್ರಿಯೆ ಹೇಗಿದೆ ನೋಡಿ.

ಕೇಂದ್ರ ಸರ್ಕಾರ ಸಾರ್ಜಜನಿಕರಿಗೆ ದುಬಾರಿ ಔಷಧಿಗಳು ಕಡಿಮೆ ದರದಲ್ಲಿ ಸಿಗಬೇಕು ಎನ್ನುವ ಕಾರಣಕ್ಕೆ ರಿಯಾಯಿತಿ ದರದಲ್ಲಿ ಔಷಧಿ ನೀಡುವ ಜನೌಷಧಿ ಕೇಂದ್ರಗಳನ್ನು ದೇಶದಾದ್ಯಂತ ತೆರೆದಿದೆ. ಆದರೆ ಕರ್ನಾಟಕದಲ್ಲಿ ಇತ್ತೀಚೆಗೆ ಕಾಂಗ್ರೆಸ್ ಸರ್ಕಾರ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಆದೇಶಿಸಿತ್ತು.

ಇದರ ವಿರುದ್ಧ ಹೈಕೋರ್ಟ್ ಗೆ  ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಇದು ನಮ್ಮ ಹಕ್ಕುಗಳ ಉಲ್ಲಂಘನೆ ಎಂದಿದ್ದರು. ಇದರ ತನಿಖೆ ನಡೆಸಿದ ಹೈಕೋರ್ಟ್ ಜನೌಷಧಿ ಕೇಂದ್ರಗಳನ್ನು ಮುಚ್ಚಲು ತಾತ್ಕಾಲಿಕ ತಡೆ ನೀಡಿತ್ತು.

ಇದರ ಬೆನ್ನಲ್ಲೇ ಇಂದು ಸಚಿವ ಶರಣ ಪ್ರಕಾಶ್ ಪಾಟೀಲ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ನೋಡಿ ನಾವು ಜನೌಷಧಿ ಕೇಂದ್ರಗಳು ಬೇಡ ಎನ್ನುತ್ತಿಲ್ಲ. ಸರ್ಕಾರೀ ಆಸ್ಪತ್ರೆಗಳ ಆವರಣದಲ್ಲಿ ಬೇಡ ಎನ್ನುತ್ತಿದ್ದೇವಷ್ಟೇ. ಈಗ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ ಅಷ್ಟೇ. ನಮ್ಮ ವಕೀಲರು ಸರ್ಕಾರದ ನಿಲುವೇನಿದೆ ಎಂದು ಕೋರ್ಟ್ ಗೆ ಮನದಟ್ಟು ಮಾಡಲಿದ್ದೇವೆ’ ಎಂದಿದ್ದಾರೆ.

ಸಚಿವರ ಹೇಳಿಕೆಗೆ ಸಾರ್ವಜನಿಕರು ತೀವ್ರ ಟೀಕೆ ನಡೆಸಿದ್ದಾರೆ. ಅದೇ ಯಾಕೆ ಬೇಡ ಎನ್ನುವುದನ್ನು ಹೇಳಿ. ನಮಗೆ ರಿಯಾಯಿತಿ ದರದಲ್ಲಿ ಔಷಧಿ ಸಿಗುವಾಗ ಅಂತಹ ಕೇಂದ್ರಗಳನ್ನು ಯಾಕೆ ಮುಚ್ಚುತ್ತೀರಿ? ಒಂದು ವೇಳೆ ಮುಚ್ಚುವುದಿದ್ದರೆ ನಮಗೆ ಸರ್ಕಾರೀ ಆಸ್ಪತ್ರೆಗಳ ಆವರಣದಲ್ಲಿ ಉಚಿತ ಔಷಧಿ ಸಿಗುವಂತೆ ಮಾಡಿ ಎಂದು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಆಮೇಲೆ, ಮೊದಲು ಇವರನ್ನು ಮೀಟ್ ಮಾಡಲಿರುವ ಸಿಎಂ, ಡಿಸಿಎಂ

Arecanut price: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬೆಂಗಳೂರು: ಉಗ್ರ ನಾಸಿರ್ ಜೈಲಿನಿಂದ ಪರಾರಿಯಾಗಲು ನಡೆದಿತ್ತು ಖತರ್ನಾಕ್ ಪ್ಲ್ಯಾನ್

ಹೃದಯಾಘಾತಕ್ಕೆ ತಿಂಗಳ ಮುಂಚೇ ಸಿಗುವ ಮುನ್ಸೂಚನೆಗಳೇನು: ಡಾ ಸಿಎನ್ ಮಂಜುನಾಥ್

ಮುಂದಿನ ಸುದ್ದಿ
Show comments