Webdunia - Bharat's app for daily news and videos

Install App

ನಾನೂ ಡಿನ್ನರ್ ಮೀಟಿಂಗ್ ಕರೀತೀನಿ, ನಂದೂ ಒಂದು ಇರ್ಲಿ ಎಂದ ಸಚಿವ ಈಶ್ವರ್ ಖಂಡ್ರೆ

Krishnaveni K
ಮಂಗಳವಾರ, 7 ಜನವರಿ 2025 (13:51 IST)
ಬೆಂಗಳೂರು: ಒಂದೆಡೆ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟ್ ವಿವಾದ ಸುದ್ದಿಯಾಗಿರುವ ಬೆನ್ನಲ್ಲೇ ಇತ್ತ ಸಚಿವ ಈಶ್ವರ್ ಖಂಡ್ರೆ ನಂದೂ ಒಂದು ಇರ್ಲಿ ಅಂತ ನಾನೂ ಡಿನ್ನರ್ ಮೀಟ್ ಮಾಡ್ತೀನಿ ಎಂದಿದ್ದಾರೆ.

ಇತ್ತೀಚೆಗೆ ಬೆಳಗಾವಿಯಲ್ಲಿ ಸಿದ್ದರಾಮಯ್ಯ ತಮ್ಮ ಆಪ್ತ ಬಳಗದವರೊಂದಿಗೆ ಡಿನ್ನರ್ ಮೀಟ್ ಮಾಡಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಡಿಕೆ ಶಿವಕುಮಾರ್ ವಿದೇಶಕ್ಕೆ ಹೋಗಿರುವಾಗ ಈ ಮೀಟಿಂಗ್ ಮಾಡಿದ್ದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿತ್ತು.

ಇದರ ಬೆನ್ನಲ್ಲೇ ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆಗಳೂ ಆರಂಭವಾಗಿತ್ತು. ಹೀಗಾಗಿ ಈಗ ಕಾಂಗ್ರೆಸ್ ನಲ್ಲಿ ಡಿನ್ನರ್ ಮೀಟ್ ಎಂಬ ಶಬ್ಧ ಭಾರೀ ಸದ್ದು ಮಾಡುತ್ತಿದೆ. ಈ ಬಗ್ಗೆ ಇಂದು ಮಾಧ್ಯಮಗಳು ಸಚಿವ ಈಶ್ವರ ಖಂಡ್ರೆಯವರನ್ನು ಪ್ರಶ್ನೆ ಮಾಡಿದ್ದಾರೆ.

ಈಶ್ವರ ಖಂಡ್ರೆ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ‘ನಾನೂ ಡಿನ್ನರ್ ಮೀಟ್ ಗೆ ಕರೆಯುತ್ತಿರುತ್ತೇನೆ. ಖಷಿಯಿಂದ ಡಿನ್ನರ್ ಮೀಟ್ ಗೆ ಕರೆದು ಒಟ್ಟು ಸೇರ್ತೀವಿ. ಅದರಲ್ಲೇನಿದೆ? ನಾನೂ ಸಚಿವರನ್ನು ಕರೀತಿನಿ, ಶಾಸಕರನ್ನು ಕರೀತಿನಿ, ನನ್ನ ಆಪ್ತ ಬಳಗದವರನ್ನು ಕರೀತಿನಿ ಅದರಲ್ಲಿ ತಪ್ಪೇನಿದೆ? ಈಗ ಹೊಸ ವರ್ಷವಿದೆ ಏನೋ ಖುಷಿಯಲ್ಲಿ ಡಿನ್ನರ್ ಮೀಟ್ ಮಾಡಿರಬಹುದಪ್ಪ’ ಎಂದು ಸಮಜಾಯಿಷಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments