Webdunia - Bharat's app for daily news and videos

Install App

ಸಚಿವ ಡಿ.ಕೆ ಶಿವಕುಮಾರ ಹೇಳಿಕೆಗೆ ಎಮ್. ಬಿ. ಪಾಟೀಲ್ ಟಾಂಗ್

Webdunia
ಗುರುವಾರ, 18 ಅಕ್ಟೋಬರ್ 2018 (22:02 IST)
ಲಿಂಗಾಯತ ಪ್ರತ್ಯೇಕತೆ ಕಾರಣದಿಂದಲೇ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಯಿತು ಎಂದು ಸಚಿವ ಡಿ.ಕೆ ಶಿವಕುಮಾರ ಹೇಳಿಕೆಗೆ ಮಾಜಿ ಸಚಿವ ಹಾಗೂ ಲಿಂಗಾಯತ ಪ್ರತ್ಯೇಕತೆ ಹೋರಾಟದ ಮುಂಚೂಣಿ ನಾಯಕ ಎಂ.ಬಿ ಪಾಟೀಲ್ ಟಾಂಗ್ ನೀಡಿದ್ದಾರೆ.

ಗದಗಿನಲ್ಲಿ ಸಚಿವ ಡಿಕೆಶಿ ಲಿಂಗಾಯತ ಪ್ರತ್ಯೇಕತೆಯಿಂದ ಹಿನ್ನಡೆಯಾಯಿತೆಂದು ಹಾಗೂ ರಂಭಾಪುರಿ ಶ್ರೀಗಳ ಕ್ಷಮೆ ಕೇಳಿದ್ದು ಸಮಂಜಸವಲ್ಲಾ ಎಂದು ಎಂ.ಬಿ ಪಾಟೀಲ್ ಹೇಳಿದರು. ಸರ್ಕಾರ ಧರ್ಮದ ವಿಚಾರದಲ್ಲಿ ಹಸ್ತಕ್ಷೇಪ ಮಾಡಿರಲಿಲ್ಲ. ಯಾರೇ ಓರ್ವ ವ್ಯಕ್ತಿ ಸಮಾಜ ಸಂಘ ಸಂಸ್ಥೆ ಸರ್ಕಾರಕ್ಕೆ ಮನವಿ ಕೊಟ್ಟ ವೇಳೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಅದೇ ರೀತಿ ಲಿಂಗಾಯತ ಪ್ರತ್ಯೇಕತೆ ಬೇಡಿಕೆಗಾಗಿ ಎರಡು ಅರ್ಜಿಗಳನ್ನು ಕೊಟ್ಟಿದ್ದರು. ಆ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗೆ ಆಗಿನ ಸಿ.ಎಂ ಸಿದ್ದರಾಮಯ್ಯ ನೀಡಿದ್ದರು.   ನಾಗಮೋಹನ್ ದಾಸ್ ನೇತೃತ್ವದ ಕಮಿಟಿಯವರು, ಪರಿಣಿತರು,ತಜ್ಞರು ನಿರ್ಣಯ ತೆಗೆದುಕೊಂಡು ಅದನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಹೀಗಾಗಿ ಸರ್ಕಾರ ಇರದಲ್ಲಿ ಹಸ್ತಕ್ಷೇಪ ಮಾಡುವ ಪ್ರಶ್ನೆ ಹಾಗೂ ಅದಕ್ಕೆ  ಕ್ಷಮೆಯಾಚಿಸುವ ಪ್ರಶ್ನೆ ಉದ್ಭವಿಸುವುದಿಲ್ಲ. ಆದರೆ ಡಿಕೆ ಶಿವಕುಮಾರ್ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲಾ ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್  ಕುಟುಕಿದ್ದಾರೆ. 
ಇನ್ನು ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆ ಹೋರಾಟದಿಂದ ಪಕ್ಷಕ್ಕೆ ಹಾನಿಯಾಗಿಲ್ಲ ಎಂದು ಸಮರ್ಥನೆ ನೀಡಿದರು. ಹಾಗೆ ನೋಡಿದರೆ ಡಿಕೆ ಶಿವಕುಮಾರ್ ಅವರೇ ವಿಚಾರ ಮಾಡಬೇಕಾಗುತ್ತದೆ. ಹಾಸನ, ಮಂಡ್ಯ, ಚಾಮರಾಜನಗರ, ಮೈಸೂರು, ಕೋಲಾರ ಸೇರಿದಂತೆ ಒಕ್ಕಲಿಗರ ಪ್ರಾಭಲ್ಯವಿರುವ ಪ್ರದೇಶಗಳಲ್ಲಿ ಎಷ್ಟು ಒಕ್ಕಲಿಗರ ಸೀಟುಗಳನ್ನು ಕಾಂಗ್ರೆಸ್  ಗೆಲ್ಲಿಸಿದ್ದಾರೆ ಎಂದು  ಪ್ರಶ್ನೆ ಮಾಡಿದರು. ಆದರೆ ಧರ್ಮದ ಹೆಸರಿನಲ್ಲಿ ಹೇಳಿಕೆ ನೀಡುವುದು ಸರಿಯಲ್ಲಾ ಎಂದು ಡಿಕೆಶಿಗೆ ಟಾಂಗ್ ನೀಡಿದರು. ನಾವು ಬಸವಣ್ಣನವರನ್ನು ಗೌರವಿಸುವ  ಹಾಗೆ ಕೆಂಪೇಗೌಡರನ್ನು ಗೌರವಿಸುತ್ತೇವೆ. ಒಕ್ಕಲಿಗರ  ಸಮಾಜವನ್ನೂ ಗೌರವಿಸಬೇಕಾಗುತ್ತದೆ. ಲಿಂಗಾಯತ ಸಮಾಜವನ್ನೂ ಗೌರವಿಸಬೇಕಾಗುತ್ತದೆ. ಅದು ನಮ್ಮ ಅಸ್ಮಿತೆಯೆಂದು ಪರೋಕ್ಷವಾಗಿ ನಮ್ಮ ಧರ್ಮಕ್ಕೂ ಸರಿಯಾದ ಗೌರವ ಸಿಗಬೇಕೆಂದು ಹೇಳಿದರು. ಆದರೆ ಡಿಕೆಶಿ ಲಿಂಗಾಯತ ಪ್ರತ್ಯೇಕತೆ ಕುರಿತು ಯಾವ ಅರ್ಥದಲ್ಲಿ ಮಾತನಾಡಿದ್ದಾರೋ ನನಗೆ ಗೊತ್ತಿಲ್ಲಾ. ಪಕ್ಷಕ್ಕೆ ಹಿನ್ನಡೆಯ ವಿಚಾರ ಪಕ್ಷದ ವೇದಿಕೆಯಲ್ಲಿ ನಾಲ್ಕು ಗೋಡೆಗಳ ಮಧ್ಯೆ ಮಾತನಾಡಬೇಕು. ಯಾರಿಂದ ಯಾಕೆ ಪಕ್ಷಕ್ಕೆ ಹಿನ್ನಡೆಯಾಗಿದೆ ಎಂಬುದು ಬಹಿರಂಗವಾಗಿ ನಡೆಯುವ ಚರ್ಚೆಯಾಗಬಾರದು. ಬಹಿರಂಗವಾಗಿ ಹೇಳಿಕೆ ನೀಡುವುದು ಏನೂ ಆಗಲಾರದ್ದಕ್ಕೆ ಕ್ಷಮೆ ಕೇಳುವಂತದ್ದು ಸರಿಯಾದ ಮಾರ್ಗವಲ್ಲ ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಹಾಲಿ ಸಚಿವ ಡಿ.ಕೆ ಶಿವಕುಮಾರ್ ಗೆ ಒಂದು ರೀತಿ ಕುಟುಕು ಮಾತು ಹೇಳಿದರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments