Select Your Language

Notifications

webdunia
webdunia
webdunia
webdunia

ಅಂಬಿ ಪತ್ನಿ ಸುಮಲತಾ ವಿರುದ್ಧ ಸಚಿವ ಡಿ.ಸಿ.ತಮ್ಮಣ್ಣ ವಾಗ್ದಾಳಿ

ಅಂಬಿ ಪತ್ನಿ ಸುಮಲತಾ ವಿರುದ್ಧ ಸಚಿವ ಡಿ.ಸಿ.ತಮ್ಮಣ್ಣ ವಾಗ್ದಾಳಿ
ಬೆಂಗಳೂರು , ಗುರುವಾರ, 7 ಮಾರ್ಚ್ 2019 (14:02 IST)
ಬೆಂಗಳೂರು : ಲೋಕಸಭಾ ಚುನಾವಣೆಗೆ ಸುಮಲತಾ ಅಂಬರೀಶ್ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಅಂಬಿ ಪತ್ನಿ ಸುಮಲತಾ ವಿರುದ್ಧ ಸಚಿವ ಡಿ.ಸಿ.ತಮ್ಮಣ್ಣ ವಾಗ್ದಾಳಿ ನಡೆಸಿದ್ದಾರೆ.


ಮಂಡ್ಯ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್  ಜೆಡಿಎಸ್ ಗೆ ಬಿಟ್ಟು ಕೊಟ್ಟ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಇಚ್ಚಿಸಿದ ಸುಮಲತಾ ಅವರು ನಂತರ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು.


ಈ ವಿಚಾರದ ಬಗ್ಗೆ ವಾಗ್ದಾಳಿ ನಡೆಸಿದ  ಸಚಿವ ಡಿ.ಸಿ.ತಮ್ಮಣ್ಣ, ‘ಅಂಬರೀಶ್ ಸಚಿವರಾಗಿದ್ದಾರೆ ಎಷ್ಟು ಜನರನ್ನು ಮಾತನಾಡಿಸಿದ್ದಾರೆ? ಎಷ್ಟು ಜನಕ್ಕೆ ಕುಡಿಯಲು ಒಂದ್ ಗ್ಲಾಸ್ ನೀರು ಕೊಟ್ಟಿದ್ದಾರೆ? ಎಷ್ಟು ಜನರ ಕಷ್ಟಗಳ ಬಗ್ಗೆ ಕಾಳಜಿ ವಹಿಸಿ ವಿಚಾರಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.


‘ಅಂಬರೀಶ್ ಹೆಸರು ಹೇಳಿಕೊಂಡು ಏನೋ ಉದ್ಧಾರ ಮಾಡ್ತೀನಿ ಅಂತಿದ್ದಾರೆ. ಅವರ ಬಣ್ಣ ಬಣ್ಣದ ಮಾತಿಗೆ ಮರುಳಾಗಬೇಡಿ. ರೈತರ ಮಗನಾದ ನಿಖಿಲ್ ರನ್ನು ಈ ಬಾರಿ ಗೆಲ್ಲಿಸಿ.’ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಲ್ಪೆ ಮೀನುಗಾರರ ನಾಪತ್ತೆ ವಿಚಾರ; ಸಂಸದ, ಶಾಸಕರನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ