Webdunia - Bharat's app for daily news and videos

Install App

ತೋಟಗಾರಿಕೆ ವಿವಿ ಸಿಬ್ಬಂದಿ ವರ್ಗಾವಣೆ ವಿಚಾರದಲ್ಲಿ ಹಸ್ತಕ್ಷೇಪ ಮಾಡಿದ ಸಚಿವರು

Webdunia
ಶನಿವಾರ, 8 ಜೂನ್ 2019 (11:27 IST)
ಬಾಗಲಕೋಟೆ :  ತೋಟಗಾರಿಕೆ ವಿಶ್ವವಿದ್ಯಾಲಯ ಸಿಬ್ಬಂದಿಯ ವರ್ಗಾವಣೆ ವಿಚಾರದಲ್ಲಿ ತೋಟಗಾರಿಕೆ ಸಚಿವರಾದ ಎಂ.ಸಿ.ಮನಗೂಳಿ ಹಸ್ತಕ್ಷೇಪ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.



ಬಾಗಲಕೋಟೆ ತೋಟಗಾರಿಕೆ ವಿವಿಯ ಸಿಬ್ಬಂದಿ ವರ್ಗಾವಣೆ ವಿಚಾರದಲ್ಲಿ ಮೂಗು ತುರಿಸಿದ ತೋಟಗಾರಿಕೆ ಖಾತೆ ಸಚಿವ ಎಂ.ಸಿ.ಮನಗೂಳಿ  ನನ್ನ ಗಮನಕ್ಕೆ ತರದೆ ವರ್ಗಾವಣೆ ಮಾಡಬಾರದೆಂದು ತೋಟಗಾರಿಕೆ ಇಲಾಖೆಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

 

ಇಲಾಖೆಯ ಕಾರ್ಯದರ್ಶಿ ಸಚಿವರ ಪತ್ರದ ಪ್ರತಿಯನ್ನು ವಿವಿ ಪ್ರಭಾರಿ ಉಪಕುಲಪತಿಗಳಿಗೆ ರವಾನೆ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ವರ್ಗಾವಣೆ ಆದೇಶಕ್ಕೆ ತಡೆಗೆ ಆಡಳಿತ ಮಂಡಳಿ ಸೂಚನೆ ನೀಡಿದ್ದರಿಂದ ವಿವಿ ಆಡಳಿತ ಮಂಡಳಿ ವರ್ಗಾವಣೆಯನ್ನು ತಡೆಹಿಡಿದಿದ್ದಾರೆ.

 

ಅಲ್ಲದೇ ಸಚಿವರು ವಿವಿ ವರ್ಗಾವಣೆಯಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ.ತೋಟಗಾರಿಕೆ ವಿವಿ ನಿಯಮಾವಳಿ ಪ್ರಕಾರ ಹಸ್ತಕ್ಷೇಪವಿಲ್ಲ. ಆದರೆ ಸಚಿವರಿಂದ ನಿಯಮ ಉಲ್ಲಂಘನೆಯಾಗಿದೆ ಎಂದು ವಿವಿ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘ ಆರೋಪ ಮಾಡಿದೆ. ಹಾಗೇ ಸಚಿವರು ಈ ಕಾರ್ಯದಿಂದ ಹಿಂದೆ ಸರಿಯುವಂತೆ ಆಗ್ರಹಿಸಿದ್ದು, ಇಲ್ಲವಾದರೆ ಸಚಿವರ ವಿರುದ್ಧ ಪ್ರತಿಭಟನೆ ನಡೆಸುವುದಾಗಿ  ಎಚ್ಚರಿಕೆ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments