Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಇಂತಹ ಘಟನೆಗಳು ಸಾಮಾನ್ಯ ಎಂದ ಸಚಿವ ಪರಮೇಶ್ವರ್

Krishnaveni K
ಸೋಮವಾರ, 7 ಏಪ್ರಿಲ್ 2025 (16:40 IST)
ಬೆಂಗಳೂರು: ರಾಜ್ಯದ ಗೃಹಸಚಿವ ಜಿ ಪರಮೇಶ್ವರ್ ಮತ್ತೆ ತಮ್ಮ ಹೇಳಿಕೆಯಿಂದಲೇ ವಿವಾದಕ್ಕೀಡಾಗಿದ್ದಾರೆ. ಬಿಟಿಎಂ ಲೇಔಟ್ ನಲ್ಲಿ ಯುವತಿ ಮೇಲೆ ಯುವಕನೊಬ್ಬ ನಡು ರಸ್ತೆಯಲ್ಲಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರು ಇಂತಹ ಘಟನೆಗಳು ಸಾಮಾನ್ಯ ಎಂದು ಉಡಾಫೆಯಿಂದ ಹೇಳಿದ್ದಾರೆ.

ಬಿಟಿಎಂ ಲೇಔಟ್ ನಲ್ಲಿ ಏಪ್ರಿಲ್ 2 ರಂದು ತಡರಾತ್ರಿ ತನ್ನ ಗೆಳತಿಯೊಂದಿಗೆ ನಡೆದುಕೊಂಡು ಬರುತ್ತಿದ್ದಾಗ ಹಿಂದಿನಿಂದ ಬಂದ ಅಪರಿಚಿತ ಯುವಕ ಆಕೆಯನ್ನು ತಬ್ಬಿ ಲೈಂಗಿಕ ಕಿರುಕುಳ ನೀಡಿದ್ದಾನೆ.

ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ನಗರ ಪೊಲೀಸರು ಎಚ್ಚೆತ್ತುಕೊಂಡು ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಆದರೆ ಈ ಬಗ್ಗೆ ಇಂದು ಮಾಧ್ಯಮಗಳು ಕೇಳಿದಾಗ ಗೃಹಸಚಿವ ಪರಮೇಶ್ವರ್ ಉಡಾಫೆಯ ಉತ್ತರ ನೀಡಿದ್ದಾರೆ.

ಪ್ರತೀ ಏರಿಯಾವನ್ನು ಮಾನಿಟರ್ ಮಾಡಬೇಕು, ರಾತ್ರಿ ಬೀಟ್ ಹಾಕಬೇಕು ಎಂದು ಪೊಲೀಸರಿಗೆ ಸೂಚನೆ ಕೊಡುತ್ತಲೇ ಇರುತ್ತವೆ. ಅದರ ನಡುವೆಯೂ ಇಂತಹ ಘಟನೆಗಳು ಅಲ್ಲಿ ಇಲ್ಲಿ ನಡೆಯುತ್ತಿರುತ್ತದೆ ಎಂದಿದ್ದಾರೆ. ಅವರ ಈ ಹೇಳಿಕೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಗೃಹಸಚಿವರಾಗಿದ್ದುಕೊಂಡು ಇಂತಹ ಘಟನೆಯನ್ನು ಸಾಮಾನ್ಯ ಎಂದು ಉಡಾಫೆ ಮಾಡಿದರೆ ಜನರ ಗತಿಯೇನು ಎಂದು ಹಲವರು ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಎಸ್ಐಟಿ ತನಿಖೆ ಶುರು

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ಮುಂದಿನ ಸುದ್ದಿ