Webdunia - Bharat's app for daily news and videos

Install App

ಸಿಎಂ ಆದೇಶದ ವಿರುದ್ಧ ಸಚಿವ ಅಂಜನೇಯ ಅಸಮಾಧಾನ

Webdunia
ಗುರುವಾರ, 30 ಜೂನ್ 2016 (14:12 IST)
ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಅಧಿಕಾರಿಯಾಗಿರುವ ವಿಜಯಲಕ್ಷ್ಮಿಯವರನ್ನು ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅಮಾನತುಗೊಳಿಸಿ ಆದೇಶ ನೀಡಿದ್ದರು. ಇದೀಗ ಸಿಎಂ ಆದೇಶದ ವಿರುದ್ಧ ಸಚಿವ ಎಚ್.ಅಂಜನೇಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ವಿಜಯಲಕ್ಷ್ಮಿ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಬಹಿರಂಗವಾಗಿದ್ದರೂ ಮತ್ತೆ ಅವರನ್ನೇ ಸಮರ್ಥಿಸಿಕೊಂಡ ಸಚಿವ ಅಂಜನೇಯ, ಆಕೆ ಅಮಾಯಕಳು, ಭ್ರಷ್ಟಾಚಾರ ನಡೆಸಿಲ್ಲ. ವಿಚಾರಣೆ ನಡೆಸದೆಯೇ ಜಿಲ್ಲಾಧಿಕಾರಿ ಕ್ರಮ ಕೈಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿಯ ವಿರುದ್ಧವೇ ಗುಡುಗಿದರು. 
 
ಈ ಮೊದಲು ನಡೆದ ಸಭೆಯಲ್ಲಿ ಕೂಡಾ ಸಚಿವ ಅಂಜನೇಯ ವಿಜಯಲಕ್ಷ್ಮಿಯವರನ್ನು ಸಮರ್ಥಿಸಿಕೊಂಡಾಗ, ಸಿಎಂ ಸಿದ್ದರಾಮಯ್ಯ ಸಚಿವ ಅಂಜನೇಯಗೆ ತರಾಟೆಗೆ ತೆಗೆದುಕೊಂಡಿದ್ದರು. ಇದೀಗ ಮತ್ತೆ ಅವರನ್ನು ಸಮರ್ಥಿಸಿಕೊಂಡ ಸಚಿವ ಅಂಜನೇಯ ಸಿಎಂ ಸಿದ್ದರಾಮಯ್ಯ ಕೆಂಗೆಣ್ಣಿಗೆ ಗುರಿಯಾಗಿದ್ದಾರೆ.
 
ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ವಿಜಯಲಕ್ಷ್ಮಿ ಅಮಾನತು ದುರುದ್ದೇಶಪೂರ್ವಕವಾಗಿದೆ. ಅವರ ವಿರುದ್ಧದ ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ಸಚಿವ ಅಂಜನೇಯ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿರುವುದು ಸಿಎಂ ಸಿದ್ದರಾಮಯ್ಯ ಆಕ್ರೋಶಕ್ಕೆ ಕಾರಣವಾಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments