Select Your Language

Notifications

webdunia
webdunia
webdunia
webdunia

ಲಂಚ ಪ್ರಕರಣ: ಸಚಿವ ಎಚ್.ಸಿ.ಮಹದೇವಪ್ಪ ಪುತ್ರ ಸುನೀಲ್ ಬೋಸ್‍ಗೆ ಜಾಮೀನು

ಲಂಚ ಪ್ರಕರಣ: ಸಚಿವ ಎಚ್.ಸಿ.ಮಹದೇವಪ್ಪ ಪುತ್ರ ಸುನೀಲ್ ಬೋಸ್‍ಗೆ ಜಾಮೀನು
ಮೈಸೂರು , ಬುಧವಾರ, 28 ಸೆಪ್ಟಂಬರ್ 2016 (14:40 IST)
ಹಿರಿಯ ಭೂ ವಿಜ್ಞಾನಿಗೆ ಲಂಚ ಸ್ವೀಕರಿಸುವಂತೆ ಪ್ರೇರಣೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಎಚ್.ಸಿ.ಮಹದೇವಪ್ಪನವರ ಪುತ್ರ ಸುನಿಲ್ ಬೋಸ್‍‌ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 
 
ಒಂದು ಲಕ್ಷ ರೂಪಾಯಿ ಬಾಂಡ್ ಹಾಗೂ ಇಬ್ಬರ ಶೂರಿಟಿ ನೀಡುವಂತೆ ಸೂಚಿಸಿ ನ್ಯಾಯಮೂರ್ತಿಗಳಾದ ಸುಧೀಂದ್ರ ಕುಮಾರ್ ಅವರು ಜಾಮೀನು ಮಂಜೂರು ಮಾಡಿದ್ದಾರೆ.
 
‌2010 ರಲ್ಲಿ ಹಿರಿಯ ಭೂ ವಿಜ್ಞಾನಿಯಾದ ಅಲ್ಫೋಸಿಸ್ ಅವರಿಗೆ ಲಂಚ ಸ್ವೀಕರಿಸುವಂತೆ ಪ್ರೇರಣೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್.ಸಿ.ಮಹದೇವಪ್ಪನವರ ಪುತ್ರ ಸುನಿಲ್ ಬೋಸ್‍ ಎರಡನೇಯ ಆರೋಪಿಯಾಗಿದ್ದರು.
 
ಸುನಿಲ್ ಬೋಸ್ ಅವರು ನ್ಯಾಯಾಲಯಕ್ಕೆ ಶರಣಾಗಿದ್ದರು. ತದನಂತರ ಜಾಮೀನು ನೀಡುವಂತೆ ಕೋರಿ ಮೈಸೂರು ಜಿಲ್ಲಾ ಅಧಿಕ ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ದ್ವೇಷ ಲೇಖನ: ದೆಹಲಿ ಪೊಲೀಸರಿಂದ ಸುಬ್ರಹ್ಮಣ್ಯಂ ಸ್ವಾಮಿಗೆ ಸಂಕಷ್ಟ