Webdunia - Bharat's app for daily news and videos

Install App

ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಕ್ಷಮೆ ಕೇಳಿದ ಸಚಿವ ಜಮೀರ್ ಅಹ್ಮದ್

Sampriya
ಗುರುವಾರ, 26 ಸೆಪ್ಟಂಬರ್ 2024 (19:04 IST)
Photo Courtesy X
ಬೆಂಗಳೂರು: ಹೈಕೋರ್ಟ್ ತೀರ್ಪನ್ನು ಪೊಲಿಟಿಕಲ್ ಜಡ್ಜ್‌ಮೆಂಟ್ ಎಂದಿದ್ದ ಸಚಿವ ಜಮೀರ್ ಅಹ್ಮದ್ ಅವರು ಇದೀಗ ಬಾಯಿ ತಪ್ಪಿನಿಂದ ನಾನು ಒಂದು ಪದ ಬಳಸಿದ್ದೆ ಸಮರ್ಥನೆ ಮಾಡಿಕೊಂಡಿದ್ದಾರೆ.

ಮುಡಾ ಹಗರಣದಲ್ಲಿ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ ಹೈಕೋರ್ಟ್‌ ತೀರ್ಪನ್ನು ಪೊಲಿಟಿಕಲ್‌ ಜಡ್ಜ್‌ಮೆಂಟ್‌ ಎಂದು ಹೇಳುವ ಮೂಲಕ ಜಮೀರ್‌ ಅವರು ಭಾರೀ ಟೀಕೆಗೆ ಒಳಗಾಗಿದ್ದರು.

ವಿರೋಧ ಪಕ್ಷದವರು ಜಮೀರ್ ಹೇಳಿಕೆಗೆ ಆಕ್ರೋಶ ಹೊರಹಾಕಿದ್ದು, ಇದರ ಬೆನ್ನಲ್ಲೇ ಜಮೀರ್ ಸುದ್ದಿಗೋಷ್ಠಿಯಲ್ಲಿ ಸಮರ್ಥನೆ ನೀಡಿದ್ದಾರೆ.

ನಿನ್ನೆ  ಹೇಳಿಕೆ ನೀಡುವಾಗ ಒಂದು ಪದ ಬಳಸಿದೆ. ರಾಜಕೀಯ ಮಾಡುತ್ತಾರೆ ಅಂತ ಹೇಳುವ ಬದಲು ಪೊಲಿಟಿಕಲ್ ಜಡ್ಜ್ ಮೆಂಟ್ ಅಂತ ಹೇಳಿದ್ದೆ. ನಾನು ರಾಜಕೀಯ ಲಾಭ ಪಡೆಯುತ್ತಿದ್ದಾರೆ  ಅಂತ ಹೇಳೋಕೆ ಹೋಗಿದ್ದೆ. ನ್ಯಾಯಾಲಯದ ಬಗ್ಗೆ ನನಗೆ ಗೌರವ ಇದೆ. ತಪ್ಪಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.‌

ಇಂದು ನಡೆದ ಕ್ಯಾಬಿನೆಟ್‌ ಸಭೆಯಲ್ಲಿ ಜಮೀರ್‌ ಹೇಳಿಕೆಯ ಬಗ್ಗೆ ಜೋರು ಚರ್ಚೆ ನಡೆದಿದೆ. ಹಿರಿಯ ನಾಯಕರು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಜಮೀರ್‌ ಕ್ಷಮೆ ಕೇಳುವ ಮೂಲಕ ವಿಚಾರವನ್ನು ತಣ್ಣಗೆ ಮಾಡಲು ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments